ಆ್ಯಪ್ನಗರ

ಸಾಧ್ಯವಿದ್ದರೆ ನನ್ನ ಜತೆ ಸಂಸ್ಕೃತ ಶ್ಲೋಕ ಪಠಿಸಿ: ಪ್ರಧಾನಿ ಮೋದಿ, ಅಮಿತ್ ಶಾಗೆ ದೀದಿ ಸವಾಲು

'ಕೇವಲ ಹಣೆಯ ಮೇಲೆ ತಿಲಕ ಇಡುವುದೇ ಧಾರ್ಮಿಕ ಶ್ರದ್ಧೆ ಇರುವವರು ಎಂಬುದಕ್ಕೆ ಮಾನದಂಡವಲ್ಲ. ನನ್ನ ಜತೆ ಸಂಸ್ಕೃತ ಶ್ಲೋಕಗಳ ಪಠಣದ ಸ್ಪರ್ಧೆಗೆ ಬನ್ನಿ ಎಂದು ನಾನು ಅಮಿತ್‌ಬಾಬು ಮತ್ತು ನರೇಂದ್ರಬಾಬು ಅವರಿಗೆ ಆಹ್ವಾನ ನೀಡುತ್ತಿದ್ದೇನೆ. ಸಂಸ್ಕೃತ ಶ್ಲೋಕಗಳ ಬಗ್ಗೆ ಯಾರಿಗೆ ಹೆಚ್ಚು ಆಳವಾದ ಜ್ಞಾನವಿದೆಯೋ ನೋಡೋಣ' ಎಂದು ಮಮತಾ ಬ್ಯಾನರ್ಜಿ ಹೇಳಿದರು.

Vijaya Karnataka Web 20 Mar 2019, 5:30 pm
ಕೋಲ್ಕತ: ತಾಕತ್ತಿದ್ದರೆ ನನ್ನ ಜತೆಗೆ ಸಂಸ್ಕೃತ ಶ್ಲೋಕಗಳ ಪಠಣ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ.
Vijaya Karnataka Web Mamata Banerjee


ತಮ್ಮ ಟೀಕಾಕಾರರಿಗೆ ಸವಾಲು ಹಾಕಿದ ದೀದಿ, ಬಂಗಾಳದಲ್ಲಿ ಧಾರ್ಮಿಕ ಆಚರಣೆಗಳಿಗೂ ಅಪಾಯ ಎದುರಾಗಿದೆ ಎಂದು ಹೇಳಿಕೊಂಡರು.

'ಕೇವಲ ಹಣೆಯ ಮೇಲೆ ತಿಲಕ ಇಡುವುದೇ ಧಾರ್ಮಿಕ ಶ್ರದ್ಧೆ ಇರುವವರು ಎಂಬುದಕ್ಕೆ ಮಾನದಂಡವಲ್ಲ. ನನ್ನ ಜತೆ ಸಂಸ್ಕೃತ ಶ್ಲೋಕಗಳ ಪಠಣದ ಸ್ಪರ್ಧೆಗೆ ಬನ್ನಿ ಎಂದು ನಾನು ಅಮಿತ್‌ಬಾಬು ಮತ್ತು ನರೇಂದ್ರಬಾಬು ಅವರಿಗೆ ಆಹ್ವಾನ ನೀಡುತ್ತಿದ್ದೇನೆ. ಸಂಸ್ಕೃತ ಶ್ಲೋಕಗಳ ಬಗ್ಗೆ ಯಾರಿಗೆ ಹೆಚ್ಚು ಆಳವಾದ ಜ್ಞಾನವಿದೆಯೋ ನೋಡೋಣ' ಎಂದು ಮಮತಾ ಬ್ಯಾನರ್ಜಿ ಹೇಳಿದರು.

ದುರ್ಗಾ ಮೂರ್ತಿಗಳ ವಿಸರ್ಜನೆ ಹಾಗೂ ಶಾಲೆಗಳಲ್ಲಿ ಸರಸ್ವತಿ ಪೂಜೆಗೆ ತೃಣಮೂಲ ಕಾಂಗ್ರೆಸ್ ಸರಕಾರ ಅನುಮತಿ ನೀಡುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದ ಹಿನ್ನೆಲೆಯಲ್ಲಿ ದೀದಿ ಈ ಸವಾಲು ಹಾಕಿದ್ದಾರೆ. ರಾಜ್ಯದಲ್ಲಿ ಪೂಜೆ ಮಾಡುವುದೂ ಅಪರಾಧವೆನ್ನುವ ಪರಿಸ್ಥಿತಿ ಬಂದಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು.

ಚುನಾವಣೆಗೆ ಮುನ್ನ, ಅಂತಾರಾಷ್ಟ್ರೀಯ ಮಾರ್ವಾಡಿ ಫೆಡರೇಶನ್ ಆಯೋಜಿಸಿದ್ದ ಹೋಳಿ ಸಂಭ್ರಮದಲ್ಲಿ ಭಾಗವಹಿಸಿದ್ದ ಮಮತಾ ಬ್ಯಾನರ್ಜಿ, 'ದಿಲ್ಲಿಯಲ್ಲಿ ಕುಳಿತ ಕೆಲವರು ನಮ್ಮತ್ತ ಬೊಟ್ಟು ಮಾಡುತ್ತಾರೆ. ನಾವು ಹಲವಾರು ವರ್ಷಗಳಿಂದ ದುರ್ಗಾಪೂಜೆ ಮಾಡುತ್ತಿದ್ದೇವೆ. ನವರಾತ್ರಿ, ಛತ್ ಪೂಜಾ ಮತ್ತು ಗಣಪತಿ ವಂದನಾದಂತಹ ಧಾರ್ಮಿಕ ಆಚರಣೆಗಳನ್ನು ನಾವು ಎತ್ತಿ ಹಿಡಿದಿದ್ದೇವೆ' ಎಂದು ಹೇಳಿದರು.

ಸರಕಾರದ ದೇಗುಲಗಳ ಸೌಂದರೀಕರಣ ಯೋಜನೆಯನ್ನು ಉಲ್ಲೇಖಿಸಿದ ಅವರು, ದಕ್ಷಿಣೇಶ್ವರ ಮಂದಿರದಲ್ಲಿ ಸ್ಕೈವಾಕ್ ನಿರ್ಮಿಸಲಾಗಿದೆ ಎಂದು ತಿಳಿಸಿದರು.

'ಇದುವರೆಗೆ ಎಷ್ಟು ಮಂದಿರಗಳನ್ನು ನಿರ್ಮಿಸಲಾಗಿದೆ? ಅವರಿಗೆ ಒಂದು ರಾಮ ಮಂದಿರವನ್ನೂ ನಿರ್ಮಿಸಲಾಗಿಲ್ಲ. ಅವರು ಅದನ್ನು ಕೇವಲ ಚುನಾವಣೆ ಭರವಸೆಯಾಗಿ ಮಾತ್ರ ಬಳಸುತ್ತಿದ್ದಾರೆ' ಎಂದು ದೀದಿ ಟೀಕಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌