ಆ್ಯಪ್ನಗರ

ಮಸೂದ್‌ಗೆ ಪ್ರಜ್ಞಾ ಸಿಂಗ್ ಶಾಪ ನೀಡಿದ್ದರೆ, ಸರ್ಜಿಕಲ್ ಸ್ಟ್ರೈಕ್ ಅಗತ್ಯವಿರಲಿಲ್ಲ: ದಿಗ್ವಿಜಯ್ ಸಿಂಗ್

ಮಹಾರಾಷ್ಟ್ರ ಉಗ್ರ ನಿಗ್ರಹ ದಳದ ಮುಖ್ಯಸ್ಥರಾಗಿದ್ದ ಹೇಮಂತ್‌ ಕರ್ಕರೆ ಅವರು ಜೀವ ಕಳೆದುಕೊಂಡಿದ್ದು ತಮ್ಮ ಶಾಪದಿಂದ ಎಂದು ಹೇಳುವ ಮೂಲಕ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ವಿವಾದ ಸೃಷ್ಟಿಸಿದ್ದರು.

Navbharat Times 28 Apr 2019, 2:31 pm
ಹೊಸದಿಲ್ಲಿ: ಜೈಷೆ ಮೊಹಮ್ಮದ್‌ ಭಯೋತ್ಪಾದಕ ಸಂಘಟನೆಯ ಸಂಸ್ಥಾಪಕ ಮಸೂದ್ ಅಜರ್‌ಗೆ ಪ್ರಜ್ಞಾ ಸಿಂಗ್ ಠಾಕೂರ್ ಶಾಪ ನೀಡಿದ್ದರೆ, ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸುವ ಅಗತ್ಯವೇ ಇರಲಿಲ್ಲ ಎಂದು ಕಾಂಗ್ರೆಸ್ ಮುಖಂಡ, ಭೋಪಾಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ವ್ಯಂಗ್ಯವಾಡಿದ್ದಾರೆ.
Vijaya Karnataka Web digi


ದೇಶಕ್ಕಾಗಿ ಹುತಾತ್ಮರಾಗಿರುವ ಭಯೋತ್ಪಾದಕ ನಿಗ್ರಹದಳ ಮುಖ್ಯಸ್ಥ ಹೇಮಂತ್ ಕರ್ಕರೆ ಅವರಿಗೆ ಶಾಪ ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಅದೇ ರೀತಿ ಉಗ್ರ ಮಸೂದ್ ಅಜರ್‌ಗೂ ಶಾಪ ನೀಡಿದ್ದರೆ, ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸುವ ಅಗತ್ಯವೇ ಇರಲಿಲ್ಲ ಎಂದಿದ್ದಾರೆ.


ಮಹಾರಾಷ್ಟ್ರ ಉಗ್ರ ನಿಗ್ರಹ ದಳದ ಮುಖ್ಯಸ್ಥರಾಗಿದ್ದ ಹೇಮಂತ್‌ ಕರ್ಕರೆ ಅವರು ಜೀವ ಕಳೆದುಕೊಂಡಿದ್ದು ತಮ್ಮ ಶಾಪದಿಂದ ಎಂದು ಹೇಳುವ ಮೂಲಕ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ವಿವಾದ ಸೃಷ್ಟಿಸಿದ್ದರು.

2008ರ ಮುಂಬಯಿ ಉಗ್ರ ದಾಳಿ ವೇಳೆ ಹೇಮಂತ್‌ ಕರ್ಕರೆ ಪ್ರಾಣ ಕಳೆದುಕೊಂಡು ಹುತಾತ್ಮರಾಗಿದ್ದರು. ಪ್ರಜ್ಞಾ ಸಿಂಗ್‌ ಠಾಕೂರ್‌ ಆರೋಪಿಯಾಗಿದ್ದ 2008ರ ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಯನ್ನು ಕರ್ಕರೆ ನಡೆಸುತ್ತಿದ್ದರು. ''ನನ್ನ ವಿರುದ್ಧ ಪುರಾವೆಗಳು ಇಲ್ಲದಿರುವಾಗ ಜೈಲಿನಲ್ಲಿ ಕೊಳೆಯುವಂತೆ ಏಕೆ ಮಾಡುತ್ತೀರಿ? ಬಿಟ್ಟುಬಿಡಿ,'' ಎಂದು ಕರ್ಕರೆ ಅವರಲ್ಲಿ ಕೇಳಿಕೊಂಡಾಗ ಅವರು, ''ನಿಮ್ಮ ವಿರುದ್ಧ ಸಾಕ್ಷ್ಯಗಳು ಇಲ್ಲದಿದ್ದರೆ ಅವುಗಳನ್ನು ಸೃಷ್ಟಿ ಮಾಡಿಕೊಂಡು ಬರುತ್ತೇನೆಯೇ ಹೊರತು ಯಾವ ಕಾರಣಕ್ಕೂ ನಿಮ್ಮನ್ನು ಬಿಡುವುದಿಲ್ಲ. ಎಂದಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಹಿಂಸೆ ನೀಡುತ್ತಿದ್ದರು. ಆಗ ನಾನು ಅವರಿಗೆ ನೀವು ನಾಶವಾಗಿ ಹೋಗುತ್ತೀರಿ ಎಂದು ಶಪಿಸಿದ್ದೆ. ಅದಾಗಿ ಮೂರು ತಿಂಗಳಲ್ಲಿಯೇ ಅವರು ಮುಂಬಯಿ ಉಗ್ರ ದಾಳಿಯಲ್ಲಿ ಮೃತಪಟ್ಟರು,'' ಎಂದು ಪ್ರಜ್ಞಾ ಸಿಂಗ್‌ ಠಾಕೂರ್‌ ಮೊನ್ನೆಯಷ್ಟೆ ಹೇಳಿಕೆ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌