ಆ್ಯಪ್ನಗರ

ರಾಜ್ಯದಿಂದ ಸ್ಪರ್ಧಿಸಲು ರಾಹುಲ್ ಗಾಂಧಿಗೆ ಆಹ್ವಾನ ನೀಡಿದ ಗುಂಡೂರಾವ್

ಕಾಂಗ್ರೆಸ್ ಕಷ್ಟದಲ್ಲಿದ್ದಾಗೆಲ್ಲ ಕರ್ನಾಟಕ ಬೆನ್ನೆಲಬಾಗಿ ನಿಂತಿದೆ. ಸದ್ಯದ ರಾಜಕೀಯ ಸ್ಥಿತಿಗತಿಗಳನ್ನು ನೋಡಿದರೆ ಕಾಂಗ್ರೆಸ್ ಪ್ರಬಲವಾಗಿದೆ.

Vijaya Karnataka Web 18 Mar 2019, 12:05 pm
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ.
Vijaya Karnataka Web dinesh


ಕಾಂಗ್ರೆಸ್ ಕಷ್ಟದಲ್ಲಿದ್ದಾಗೆಲ್ಲ ಕರ್ನಾಟಕ ಬೆನ್ನೆಲಬಾಗಿ ನಿಂತಿದೆ. ಸದ್ಯದ ರಾಜಕೀಯ ಸ್ಥಿತಿಗತಿಗಳನ್ನು ನೋಡಿದರೆ ಕಾಂಗ್ರೆಸ್ ಪ್ರಬಲವಾಗಿದೆ. ನೀವು ಕರ್ನಾಟಕದಿಂದ ಸ್ಪರ್ಧಿಸುವುದನ್ನು ಸ್ವಾಗತಿಸುತ್ತೇವೆ. ಇದು ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌ಗೆ ಸ್ಪೂರ್ಥಿ ತಂದುಕೊಡಲಿದೆ. ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಕೂಡ ರಾಜ್ಯದಿಂದ ಸ್ಪರ್ಧಿಸಿದ್ದರು ಎಂದು ಕೆಪಿಸಿಸಿ ಅಧ್ಯಕ್ಷರು ರಾಹುಲ್ ಗಾಂಧಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಅಭಿಪ್ರಾಯಪಟ್ಟಿದ್ದರು.

ಕರ್ನಾಟಕದ ಜನರು ರಾಷ್ಟ್ರೀಯ ಕಾಂಗ್ರೆಸ್ ನಾಯಕರನ್ನು ಬೆಂಬಲಿಸುವ ಮೂಲಕ ಉತ್ತೇಜಿಸುತ್ತ ಬಂದಿದ್ದಾರೆ. ಇದು ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿಷಯದಲ್ಲಿ ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ದೇಶದ ಮುಂದಿನ ಪ್ರಧಾನಿಯಾಗಲಿರುವ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಸ್ಪರ್ಧಿಸಬೇಕು ಮತ್ತು ರಾಜಕೀಯ ಬೆಳವಣಿಗೆಗೆ ಮಾದರಿಯಾಗಬೇಕೆಂದು ಬಯಸುವುದಾಗಿ ತಿಳಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌