ಆ್ಯಪ್ನಗರ

ಎನ್‌ಡಿಎಗೆ ನಿರಾಯಾಸ ಗೆಲುವು: ಪ್ರಧಾನಿ ವಿಶ್ವಾಸ

''ದೇಶಾದ್ಯಂತ ಆಡಳಿತ ಪರ ಅಲೆ ಇದೆ. ದೇಶದಲ್ಲಿ ಮೊದಲ ಬಾರಿಗೆ ನಾನು ಆಡಳಿತ ಪರ ಅಲೆ ನೋಡುತ್ತಿದ್ದೇನೆ. ಕಳೆದ ಚುನಾವಣೆಗಿಂತ ಹೆಚ್ಚಿನ ಸ್ಥಾನವನ್ನು ನಾವು ಗೆಲ್ಲುವುದು ನಿಶ್ಚಿತ,'' ಎಂದು ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

Vijaya Karnataka 6 Apr 2019, 11:07 am
ಹೊಸದಿಲ್ಲಿ: ದೇಶದ ಜನತೆಗೆ ನಮ್ಮ ಸರಕಾರದ ಸಾಧನೆಗಳ ಬಗ್ಗೆ ತೃಪ್ತಿ ಇದೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಎನ್‌ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Vijaya Karnataka Web Narendra Modi 1200


''ದೇಶಾದ್ಯಂತ ಆಡಳಿತ ಪರ ಅಲೆ ಇದೆ. ದೇಶದಲ್ಲಿ ಮೊದಲ ಬಾರಿಗೆ ನಾನು ಆಡಳಿತ ಪರ ಅಲೆ ನೋಡುತ್ತಿದ್ದೇನೆ. ಕಳೆದ ಚುನಾವಣೆಗಿಂತ ಹೆಚ್ಚಿನ ಸ್ಥಾನವನ್ನು ನಾವು ಗೆಲ್ಲುವುದು ನಿಶ್ಚಿತ,'' ಎಂದು ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಭದ್ರತಾ ಪಡೆಗಳ ಸಾಮರ್ಥ್ಯ‌ವನ್ನು ಕಾಂಗ್ರೆಸ್‌ ಅವಮಾನಿಸುತ್ತಿದೆ ಎಂದು ಇದೇವೇಳೆ ದೂರಿದ ಅವರು, ''ಮತಬ್ಯಾಂಕ್‌ ಮೇಲೆ ಕಣ್ಣಿಟ್ಟು ದೇಶವನ್ನು ವಿಭಜಿಸುವುದೇ ಕಾಂಗ್ರೆಸ್‌ ಜಾಯಮಾನ. ಕಾಂಗ್ರೆಸ್‌ ಮಿತ್ರಪಕ್ಷ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಉಮರ್‌ ಅಬ್ದುಲ್ಲಾ ಜಮ್ಮು-ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕು ಎನ್ನುವ ಮಾತನಾಡುತ್ತಾರೆ. ಈ ಬಗ್ಗೆ ಮೌನ ವಹಿಸುವ ಕಾಂಗ್ರೆಸ್‌ನವರಿಗೆ ದೇಶದ ಭದ್ರತೆ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ,'' ಎಂದು ಟೀಕಿಸಿದ್ದಾರೆ.

''ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದ್ರೋಹ ಕಾನೂನು ರದ್ದುಗೊಳಿಸುವ ಭರವಸೆ ನೀಡಿದೆ. ಆದರೆ ಇದೇ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರಕಾರ, ತಮಿಳುನಾಡಿನಲ್ಲಿ ಕೂಡಂಕುಲಂ ಅಣುಸ್ಥಾವರದ ವಿರುದ್ಧ ಪ್ರತಿಭಟನೆ ನಡೆಸಿದ 6000 ಜನರ ವಿರುದ್ಧ ದೇಶದ್ರೋಹ ಕಾನೂನಿನಡಿ ಪ್ರಕರಣ ದಾಖಲಿಸಿತ್ತು. ಈ ಬಗ್ಗೆ ಅದು ಚಕಾರ ಎತ್ತುವುದಿಲ್ಲ,'' ಎಂದು ಮೋದಿ ಕಿಡಿಕಾರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ