ಆ್ಯಪ್ನಗರ

ಗಿರಿರಾಜ್‌ಗೆ ಆಯೋಗ ನೋಟಿಸ್‌

ಏ.24ರಂದು ಬಹಿರಂಗ ಸಭೆಯಲ್ಲಿ ಮಾತನಾಡಿದ್ದ ಸಿಂಗ್‌ ''ವಂದೇ ಮಾತರಂ ಹೇಳದವರು ತಾಯಿನಾಡನ್ನು ಎಂದೂ ಗೌರವಿಸಲಾರರು. ದೇಶವು ಅವರನ್ನು ಎಂದೂ ಕ್ಷಮಿಸುವುದಿಲ್ಲ,'' ಎಂದು ಹೇಳಿದ್ದರು.

Vijaya Karnataka 30 Apr 2019, 5:00 am
ಹೊಸದಿಲ್ಲಿ: ಬಿಹಾರದ ಬೆಗುಸರಾಯ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಅವರಿಗೆ ನೀತಿ ಸಂಹಿತೆ ಉಲ್ಲಂಘನೆಗಾಗಿ ಚುನಾವಣಾ ಆಯೋಗ ಸೋಮವಾರ ನೋಟಿಸ್‌ ಜಾರಿ ಮಾಡಿದ್ದು, 24 ಗಂಟೆಯೊಳಗೆ ಉತ್ತರಿಸುವಂತೆ ಸೂಚಿಸಿದೆ.
Vijaya Karnataka Web ec issues showcause notice to giriraj singh for remark against muslims
ಗಿರಿರಾಜ್‌ಗೆ ಆಯೋಗ ನೋಟಿಸ್‌


ಬೆಗುಸರಾಯ್‌ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಸಿಂಗ್‌ ವಿರುದ್ಧ ಜಿಲ್ಲಾಡಳಿತ ಈಗಾಗಲೇ ಪ್ರಕರಣ ದಾಖಲಿಸಿದೆ. ಏ.24ರಂದು ಬಹಿರಂಗ ಸಭೆಯಲ್ಲಿ ಮಾತನಾಡಿದ್ದ ಸಿಂಗ್‌ ''ವಂದೇ ಮಾತರಂ ಹೇಳದವರು ತಾಯಿನಾಡನ್ನು ಎಂದೂ ಗೌರವಿಸಲಾರರು. ದೇಶವು ಅವರನ್ನು ಎಂದೂ ಕ್ಷಮಿಸುವುದಿಲ್ಲ,'' ಎಂದು ಹೇಳಿದ್ದರು. ಮುಸ್ಲಿಂ ಸಮುದಾಯದವರ ವಿರುದ್ಧ ಮಾತನಾಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌