ಆ್ಯಪ್ನಗರ

ಅಂತಿಮ ಹಂತದ ಮತದಾನ ನಂತರವೇ ಮತಗಟ್ಟೆ ಸಮೀಕ್ಷೆ ಪ್ರಸಾರ: ಮಾಧ್ಯಮಗಳಿಗೆ ಆಯೋಗ ಸೂಚನೆ

ಮಾಧ್ಯಮಗಳಿಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಪತ್ರಿಕೆಗಳು, ವಿದ್ಯುನ್ಮಾನ ಮಾಧ್ಯಮ, ಅಂತರ್ಜಾಲ, ರೇಡಿಯೋ, ವೆಬ್‌ಸೈಟ್‌ನಲ್ಲಿಯೂ ಸಮೀಕ್ಷೆ ಪ್ರಸಾರ ಮಾಡಬಾರದು ಎಂದು ಆಯೋಗ ಸ್ಪಷ್ಟಪಡಿಸಿದೆ.

Vijaya Karnataka Web 24 Mar 2019, 5:35 pm
ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಸ್ಪಷ್ಟ ಬಹುಮತ ದೊರೆಯಬಹುದು ಎಂಬುದರ ದಿಕ್ಸೂಚಿ ನೀಡುವ ಮತಗಟ್ಟೆ ಸಮೀಕ್ಷೆ ಪ್ರಸಾರ ಮಾಡಬಹುದು ಎಂದು ಮಾಧ್ಯಮಗಳಿಗೆ ಚುನಾವಣೆ ಆಯೋಗ ಸೂಚನೆ ನೀಡಿದೆ.
Vijaya Karnataka Web ಚುನಾವಣೆ ಆಯೋಗ
ಚುನಾವಣೆ ಆಯೋಗ


ಏಪ್ರಿಲ್‌ 11ರಿಂದ ಆರಂಭವಾಗಲಿರುವ ಮತದಾನ ಒಟ್ಟು 7 ಹಂತಗಳಲ್ಲಿ ನಡೆಯಲಿದೆ. ಮೇ 19ರಂದು ಕೊನೆಯ ಹಂತದ ಮತದಾನ ನಡೆಯಲಿದೆ. ಆ ನಂತರವಷ್ಟೇ ಮತಗಟ್ಟೆ ಅಥವಾ ಚುನಾವಣೋತ್ತರ ಸಮೀಕ್ಷೆ ಪ್ರಸಾರ ಮಾಡಬಹುದು ಎಂದು ತಿಳಿಸಲಾಗಿದೆ.

ಈ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗ ಸೂಚಿಸಿದೆ.

ಅಂತೆಯೇ ಮಾಧ್ಯಮಗಳಿಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.

ಪತ್ರಿಕೆಗಳು, ವಿದ್ಯುನ್ಮಾನ ಮಾಧ್ಯಮ, ಅಂತರ್ಜಾಲ, ರೇಡಿಯೋ, ವೆಬ್‌ಸೈಟ್‌ನಲ್ಲಿಯೂ ಸಮೀಕ್ಷೆ ಪ್ರಸಾರ ಮಾಡಬಾರದು ಎಂದು ಆಯೋಗ ಸ್ಪಷ್ಟಪಡಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಸುದ್ದಿಗಳು, ಅಭಿಪ್ರಾಯಗಳನ್ನು ವ್ಯಕ್ತಪಡಿಸುವಂತಿಲ್ಲ.

ಚುನಾವಣಾ ಆಯೋಗ ವೀಕ್ಷಕರ ತಂಡವನ್ನು ನೇಮಿಸಿದ್ದು, ಸದಸ್ಯರು ತೀವ್ರ ನಿಗಾ ವಹಿಸಲಿದ್ದಾರೆ.

ಏಳು ಹಂತಗಳಲ್ಲಿ ನಡೆಯಲಿರುವ ಚುನಾವಣೆಯ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌