ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ತವರು ಹಾಸನ ತೊರೆದು ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ನಿರೀಕ್ಷೆ ಬದಲಾಗುವ ಸಾಧ್ಯತೆಗಳು ದಟ್ಟವಾಗಿವೆ.
ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂಬ ಸ್ಪಷ್ಟ ಗುರಿಯೊಂದಿಗೆ ಲೆಕ್ಕಾಚಾರಗಳನ್ನು ಹೆಣೆಯುತ್ತಿರುವ ದೇವೇಗೌಡರು ಹಾಸನ ಅಥವಾ ಬೆಂಗಳೂರು ಉತ್ತರ ಕ್ಷೇತ್ರದ ಬದಲಿಗೆ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದರೂ ಅಚ್ಚರಿ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮತ್ತೊಂದೆಡೆ, ಮೈಸೂರು ಲೋಕಸಭಾ ಕ್ಷೇತ್ರವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಇದು ಸಕಾಲ ಎಂದು ಭಾವಿಸಿರುವ ದೇವೇಗೌಡರು ಈ ಕ್ಷೇತ್ರದಿಂದಲೇ ಕಣಕ್ಕಿಳಿದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.
ಒಟ್ಟಾರೆ ದೇವೇಗೌಡರು ಸ್ಪರ್ಧಿಸುವ ಸಾಧ್ಯತೆಗಳಿರುವ ಕ್ಷೇತ್ರಗಳು
ಇನ್ನು ಮೂರ್ನಾಲ್ಕು ದಿನಗಳಲ್ಲಿ ಚುನಾವಣಾ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಜೆಡಿಎಸ್ ಭದ್ರಕೋಟೆಯಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದು, ಗುರುವಾರದಿಂದ ಮೈಸೂರು ಭಾಗದಲ್ಲೇ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ದೇವೇಗೌಡರೂ ಮೈಸೂರಿಗೆ ತೆರಳಿದ್ದು, ಕ್ಷೇತ್ರದ ಚುನಾವಣಾ ತಂತ್ರಗಾರಿಕೆ ಅಂತಿಮಗೊಳಿಸುವ ಪ್ರಯತ್ನ ನಡೆಯುತ್ತಿದೆ.
ನಿರೀಕ್ಷಿತ ದೇವೇಗೌಡರ ಕುಟುಂಬ ಸ್ಪರ್ಧಿಗಳು
ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂಬ ಸ್ಪಷ್ಟ ಗುರಿಯೊಂದಿಗೆ ಲೆಕ್ಕಾಚಾರಗಳನ್ನು ಹೆಣೆಯುತ್ತಿರುವ ದೇವೇಗೌಡರು ಹಾಸನ ಅಥವಾ ಬೆಂಗಳೂರು ಉತ್ತರ ಕ್ಷೇತ್ರದ ಬದಲಿಗೆ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದರೂ ಅಚ್ಚರಿ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮತ್ತೊಂದೆಡೆ, ಮೈಸೂರು ಲೋಕಸಭಾ ಕ್ಷೇತ್ರವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಇದು ಸಕಾಲ ಎಂದು ಭಾವಿಸಿರುವ ದೇವೇಗೌಡರು ಈ ಕ್ಷೇತ್ರದಿಂದಲೇ ಕಣಕ್ಕಿಳಿದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.
ಒಟ್ಟಾರೆ ದೇವೇಗೌಡರು ಸ್ಪರ್ಧಿಸುವ ಸಾಧ್ಯತೆಗಳಿರುವ ಕ್ಷೇತ್ರಗಳು
- ಹಾಸನ ಲೋಕಸಭಾ ಕ್ಷೇತ್ರ
- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ
- ತುಮಕೂರು ಲೋಕಸಭಾ ಕ್ಷೇತ್ರ
- ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ
ಇನ್ನು ಮೂರ್ನಾಲ್ಕು ದಿನಗಳಲ್ಲಿ ಚುನಾವಣಾ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಜೆಡಿಎಸ್ ಭದ್ರಕೋಟೆಯಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದು, ಗುರುವಾರದಿಂದ ಮೈಸೂರು ಭಾಗದಲ್ಲೇ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ದೇವೇಗೌಡರೂ ಮೈಸೂರಿಗೆ ತೆರಳಿದ್ದು, ಕ್ಷೇತ್ರದ ಚುನಾವಣಾ ತಂತ್ರಗಾರಿಕೆ ಅಂತಿಮಗೊಳಿಸುವ ಪ್ರಯತ್ನ ನಡೆಯುತ್ತಿದೆ.
ನಿರೀಕ್ಷಿತ ದೇವೇಗೌಡರ ಕುಟುಂಬ ಸ್ಪರ್ಧಿಗಳು
- ಎಚ್ ಡಿ ದೇವೇಗೌಡ
- ಪ್ರಜ್ವಲ್ ರೇವಣ್ಣ
- ನಿಖಿಲ್ ಕುಮಾರ್