ಆ್ಯಪ್ನಗರ

ಕಾಂಗ್ರೆಸ್‌ಅನ್ನು ಕ್ಷಮಿಸಿದ್ದೇನೆ: ಜಗನ್‌ಮೋಹನ್‌ ರೆಡ್ಡಿ

ನನ್ನ ಹೃದಯದಿಂದ ಅವರನ್ನು ಕ್ಷಮಿಸಿದ್ದೇನೆ. ನನಗೆ ನನ್ನ ರಾಜ್ಯದ ಹಿತ ಮುಖ್ಯ. ರಾಜ್ಯಕ್ಕೆ ವಿಶೇಷ ಸ್ಥಾನಮಾನ ಪಡೆಯುವುದು ನನ್ನ ಗುರಿ ಎಂದು ಜಗನ್‌ ಮಾಧ್ಯಮಕ್ಕೆ ತಿಳಿಸಿದ್ದಾರೆ.

TOI.in 6 Apr 2019, 11:34 am
ವಿಜಯವಾಡ: ನನಗೆ ಯಾರ ಮೇಲೂ ದ್ವೇಷವಿಲ್ಲ. ಪ್ರತೀಕಾರ ತೆಗೆದುಕೊಳ್ಳುವವನು ನಾನಲ್ಲ ಎಂದು ನಂಬಿದ್ದೇನೆ. ಇದು ದೇವರು ನಿರ್ಧರಿಸಬೇಕಾದ ವಿಚಾರ ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಮುಖ್ಯಸ್ಥ ವೈಎಸ್‌ ಜಗನ್‌ಮೋಹನ್‌ ರೆಡ್ಡಿ ತಿಳಿಸಿದ್ದಾರೆ.
Vijaya Karnataka Web Y S Jaganmohan Reddy


ಹಿಂದಿನ ದಿನಗಳಲ್ಲಿ ತಮ್ಮನ್ನು ಕಾಂಗ್ರೆಸ್‌ ಹೇಗೆ ನಡೆಸಿಕೊಂಡಿತು ಎಂಬುದನ್ನು ಮರೆತು ಕ್ಷಮಿಸಿರುವುದಾಗಿ ಜಗತ್‌ ಹೇಳಿದ್ದಾರೆ. ಆದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಒದಗಿಸುವ ಕುರಿತಾಗಿ ಪಕ್ಷ ಒಪ್ಪಿಗೆ ನೀಡಿದರೂ ಕಾಂಗ್ರೆಸ್‌ ಜತೆ ಸೇರುವುದು ಅನುಮಾನ ಎನ್ನಲಾಗಿದೆ.

ನನ್ನ ಹೃದಯದಿಂದ ಅವರನ್ನು ಕ್ಷಮಿಸಿದ್ದೇನೆ. ನನಗೆ ನನ್ನ ರಾಜ್ಯದ ಹಿತ ಮುಖ್ಯ. ರಾಜ್ಯಕ್ಕೆ ವಿಶೇಷ ಸ್ಥಾನಮಾನ ಪಡೆಯುವುದು ನನ್ನ ಗುರಿ ಎಂದು ಜಗನ್‌ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈಗಾಗಲೇ ವೈಎಸ್‌ಆರ್‌ ಕಾಂಗ್ರೆಸ್‌ ವಿರೋಧ ಪಕ್ಷ ಟಿಡಿಪಿ ಜತೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದೆ. ಕಳೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲೇ ಟಿಡಿಪಿ ಮೈತ್ರಿಯೊಂದಿಗೆ ಕಾಂಗ್ರೆಸ್‌ ಎದುರಿಸಿತ್ತು. ಎನ್‌ಡಿಎ ಜತೆಗಿದ್ದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಆಂಧ್ರಕ್ಕೆ ವಿಶೇಷ ಸ್ಥಾನಮಾನ ಸಿಗದ ಹಿನ್ನೆಲೆ ಮೈತ್ರಿ ತೊರೆದು ಕಾಂಗ್ರೆಸ್‌ ಜತೆಗೆ ಮೈತ್ರಿ ಸಾಧಿಸಿದ್ದಾರೆ.

2009ರಲ್ಲಿ ಹೆಲಿಕಾಪ್ಟರ್‌ ದುರಂತದಲ್ಲಿ ವೈಎಸ್‌ ರಾಜಶೇಖರ್‌ ರೆಡ್ಡಿ ಸಾವನ್ನಪಿದ ನಂತರ ಮುಖ್ಯಮಂತ್ರಿ ಸ್ಥಾನ ಜಗನ್‌ಮೋಹನ್‌ ರೆಡ್ಡಿ ಅವರಿಗೆ ಸಿಗದ ಹಿನ್ನೆಲೆ ಕಾಂಗ್ರೆಸ್‌ ತೊರೆದು ವೈಎಸ್‌ಆರ್‌ ಕಾಂಗ್ರೆಸ್‌ ಸ್ಥಾಪಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ