ಆ್ಯಪ್ನಗರ

ತುಮಕೂರು ಪಟ್ಟು ಬಿಡದ ಜೆಡಿಎಸ್‌

ತುಮಕೂರು ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಮೇಲೆ ದೇವೇಗೌಡರು ಕಣ್ಣಿಟ್ಟಿದ್ದಾರೆ. ಈ ಪೈಕಿ ಬೆಂಗಳೂರು ಉತ್ತರವೇ ಸುರಕ್ಷಿತ ಎಂಬ ಭಾವನೆಯನ್ನು ಅವರು ಹೊಂದಿದ್ದಾರೆ. ಹೀಗಾದಾಗ ಮಾಜಿ ಶಾಸಕರಾದ ಸುರೇಶ್‌ ಬಾಬು, ಕೃಷ್ಣಪ್ಪ, ವಿಧಾನ ಪರಿಷತ್‌ ಮಾಜಿ ಸದಸ್ಯ ರಮೇಶ್‌ ಬಾಬು ಪೈಕಿ ಯಾರಾದರೊಬ್ಬರು ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಬಹುದು ಎಂದು ಹೇಳಲಾಗುತ್ತಿದೆ.

Vijaya Karnataka 18 Mar 2019, 6:30 am
ಬೆಂಗಳೂರು: ಮೈತ್ರಿ ಧರ್ಮದ ಪ್ರಕಾರ ಲಭಿಸಿರುವ ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿ ಕಣಕ್ಕಿಳಿಸಲು ಜೆಡಿಎಸ್‌ ನಿರ್ಧರಿಸಿದ್ದು, ತುಮಕೂರು ಲೋಕಸಭಾ ಕ್ಷೇತ್ರವನ್ನು ಮರಳಿ ಪಡೆಯುವ ಪ್ರಯತ್ನದಲ್ಲಿ ನಿರತರಾಗಿರುವ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.
Vijaya Karnataka Web devegowda kumaraswamy


ತುಮಕೂರು ಸೇರಿದಂತೆ ಎಲ್ಲ 8 ಕ್ಷೇತ್ರಗಳಲ್ಲೂ ಅಭ್ಯರ್ಥಿ ಕಣಕ್ಕಿಳಿಸಲಾಗುವುದು ಎಂದು ಖುದ್ದು ದೇವೇಗೌಡರೇ ಭಾನುವಾರ ಪ್ರಕಟಿಸಿದ್ದಾರೆ. ಆದರೆ, ಈ ಕ್ಷೇತ್ರದಿಂದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಕೊನೆ ಕ್ಷಣದವರೆಗೂ ನಿಗೂಢವಾಗಿಯೇ ಉಳಿಯಲಿದೆ. ತುಮಕೂರು ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಮೇಲೆ ದೇವೇಗೌಡರು ಕಣ್ಣಿಟ್ಟಿದ್ದಾರೆ. ಈ ಪೈಕಿ ಬೆಂಗಳೂರು ಉತ್ತರವೇ ಸುರಕ್ಷಿತ ಎಂಬ ಭಾವನೆಯನ್ನು ಅವರು ಹೊಂದಿದ್ದಾರೆ. ಹೀಗಾದಾಗ ಮಾಜಿ ಶಾಸಕರಾದ ಸುರೇಶ್‌ ಬಾಬು, ಕೃಷ್ಣಪ್ಪ, ವಿಧಾನ ಪರಿಷತ್‌ ಮಾಜಿ ಸದಸ್ಯ ರಮೇಶ್‌ ಬಾಬು ಪೈಕಿ ಯಾರಾದರೊಬ್ಬರು ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಬಹುದು ಎಂದು ಹೇಳಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌