ಆ್ಯಪ್ನಗರ

ಕೇಂದ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ: ಜೆಡಿಎಸ್ ಪುನರುಚ್ಚಾರ

'ನಾವು ಕಾಂಗ್ರೆಸ್ ಜತೆಗಿದ್ದೇವೆ. ಇದಕ್ಕಿಂತ ಹೆಚ್ಚೇನೂ ಹೇಳಲಾರೆ. ಮೇ 23ರಂದು ಫಲಿತಾಂಶ ಬಂದ ಬಳಿಕ ಇಡೀ ದೇಶಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ. ಮುಂದಿನ ಬೆಳವಣಿಗೆಗಳೂ ಅದನ್ನೇ ಆಧರಿಸಿರುತ್ತವೆ' ಎಂದು ದೇವೇಗೌಡ ತಿಳಿಸಿದರು. ಈ ನಡುವೆ, ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ 18-19 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ. ದೇವೇಗೌಡರ 87ನೇ ಜನ್ಮದಿನ ಪ್ರಯುಕ್ತ ತಿರುಪತಿ ವೆಂಕಟೇಶ್ವರನ ದರ್ಶನಕ್ಕೆ ಹೊರಡುವ ಮುನ್ನ ಎಚ್‌ಡಿಕೆ ಈ ಹೇಳಿಕೆ ನೀಡಿದ್ದರು.

Vijaya Karnataka Web 18 May 2019, 3:24 pm
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ ದೇವೇಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ಬೆಂಬಲ ಘೋಷಿಸಿದ್ದಾರೆ.
Vijaya Karnataka Web HD Devegowda


ಕರ್ನಾಟಕದಲ್ಲಿ ಕಾಂಗ್ರೆಸ್ ಜತೆಗೂಡಿ ಮೈತ್ರಿ ಸರಕಾರ ರಚಿಸಿರುವ ಜೆಡಿಎಸ್‌, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿತ್ತು.

ಲೋಕಸಭಾ ಚುನಾವಣೆ ಫಲಿತಾಂಶಗಳು ಪ್ರಕಟವಾದ ಬಳಿಕ ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರಕಾರದ ಭವಿಷ್ಯ ನಿರ್ಧಾರವಾಗಲಿದೆ.

ತಮ್ಮ ಪಕ್ಷ ಪ್ರಧಾನಿ ಹುದ್ದೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿಗೆ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ ಬಳಿಕ ಗೌಡರ ಈ ಹೇಳಿಕೆ ಹೊರಬಿದ್ದಿದೆ.

'ನಾವು ಕಾಂಗ್ರೆಸ್ ಜತೆಗಿದ್ದೇವೆ. ಇದಕ್ಕಿಂತ ಹೆಚ್ಚೇನೂ ಹೇಳಲಾರೆ. ಮೇ 23ರಂದು ಫಲಿತಾಂಶ ಬಂದ ಬಳಿಕ ಇಡೀ ದೇಶಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ. ಮುಂದಿನ ಬೆಳವಣಿಗೆಗಳೂ ಅದನ್ನೇ ಆಧರಿಸಿರುತ್ತವೆ' ಎಂದು ದೇವೇಗೌಡ ತಿಳಿಸಿದರು.

ಈ ನಡುವೆ, ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ 18-19 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ. ದೇವೇಗೌಡರ 87ನೇ ಜನ್ಮದಿನ ಪ್ರಯುಕ್ತ ತಿರುಪತಿ ವೆಂಕಟೇಶ್ವರನ ದರ್ಶನಕ್ಕೆ ಹೊರಡುವ ಮುನ್ನ ಎಚ್‌ಡಿಕೆ ಈ ಹೇಳಿಕೆ ನೀಡಿದ್ದರು.

ಕಾಂಗ್ರೆಸ್‌ ಬೆಂಬಲವಿಲ್ಲದೆಯೇ ಪ್ರಾದೇಶಿಕ ಪಕ್ಷಗಳು ಕೇಂದ್ರದಲ್ಲಿ ಸರಕಾರ ರಚಿಸಲು ಸಾಧ್ಯವಿಲ್ಲ ಎಂದು ದೇವೇಗೌಡರು ಹೇಳಿದ್ದರು.

ಮಹಾರಾಷ್ಟ್ರದ ವಂಚಿತ್ ಬಹುಜನ್ ಅಘಾಡಿ ಪಕ್ಷದ ನಾಯಕ ಹಾಗೂ ಬಿ.ಆರ್ ಅಂಬೇಡ್ಕರ್‌ ಮೊಮ್ಮಗ ಪ್ರಕಾಶ್ ಅಂಬೇಡ್ಕರ್‌ ಇತ್ತೀಚೆಗೆ, ದೇವೇಗೌಡರನ್ನು 'ಕಪ್ಪು ಕುದುರೆ' ಎಂದು ಕರೆದಿದ್ದು, ಚುನಾವಣೆ ಬಳಿಕ ಪ್ರಧಾನಿ ಹುದ್ದೆಗೆ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌