ಆ್ಯಪ್ನಗರ

ಬಿಜೆಪಿ ಇರೋವರೆಗೆ ದೇಶದಿಂದ ಕಾಶ್ಮೀರ ಪ್ರತ್ಯೇಕಿಸಲು ಸಾಧ್ಯವಿಲ್ಲ: ಶಾ ಗುಡುಗು

ಛತ್ತೀಸ್‌ಗಢದ ರಾಯಗಢದಲ್ಲಿ ಗುರುವಾರ ಚುನಾವಣಾ ಪ್ರಚಾರ ಸಭೆ ನಡೆಸಿದ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರಲಿದ್ದು, ಕಾಶ್ಮೀರ ಪ್ರತ್ಯೇಕತೆಗೆ ಇಂಬು ಕೊಡುವವರನ್ನು ಮಟ್ಟಹಾಕಲಿದೆ ಎಂದು ಗುಡುಗಿದರು.

Vijaya Karnataka 19 Apr 2019, 5:00 am
ರಾಯಗಢ: ''ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಭಾರತದಿಂದ ಅದನ್ನು ಪ್ರತ್ಯೇಕಿಸಲು ಜಗತ್ತಿನ ಅಷ್ಟೂ ದುಷ್ಟಶಕ್ತಿಗಳು ಒಂದಾದರೂ ಸಾಧ್ಯವಿಲ್ಲ. ಬಿಜೆಪಿ ಕಾರ‍್ಯಕರ್ತರು ಜೀವಂತ ಇರೋವರೆಗೂ ಕಾಶ್ಮೀರ ಭಾರತದಲ್ಲೇ ಇರಲಿದೆ,'' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.
Vijaya Karnataka Web amit shah


ಛತ್ತೀಸ್‌ಗಢದ ರಾಯಗಢದಲ್ಲಿ ಗುರುವಾರ ಚುನಾವಣಾ ಪ್ರಚಾರ ಸಭೆ ನಡೆಸಿದ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರಲಿದ್ದು, ಕಾಶ್ಮೀರ ಪ್ರತ್ಯೇಕತೆಗೆ ಇಂಬು ಕೊಡುವವರನ್ನು ಮಟ್ಟಹಾಕಲಿದೆ ಎಂದು ಗುಡುಗಿದರು.

''ಜಮ್ಮು-ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿಯ ಅಗತ್ಯವಿದೆ ಎಂದು ಕಾಂಗ್ರೆಸ್‌ ಮಿತ್ರಪಕ್ಷ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಉಮರ್‌ ಅಬ್ದುಲ್ಲಾ ಹೇಳುತ್ತಾರೆ. ಒಂದು ದೇಶ ಇಬ್ಬರು ಪ್ರಧಾನಿಯನ್ನು ಹೊಂದಲು ಸಾಧ್ಯವೇ?,'' ಎಂದು ಪ್ರಶ್ನಿಸಿದ ಅವರು ಈ ಬಗ್ಗೆ 'ರಾಹುಲ್‌ ಬಾಬಾ' ಮೌನ ವಹಿಸಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಎಷ್ಟೇ ಅಡ್ಡಿಪಡಿಸಿದರೂ ಸರಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ 370ನೇ ವಿಧಿಯನ್ನು ರದ್ದುಪಡಿಸುವಲ್ಲಿ ಬಿಜೆಪಿ ಬದ್ಧತೆ ತೋರಲಿದೆ ಎಂದು ಹೇಳಿದರು.

ಬಾಲಾಕೋಟ್‌ ವಾಯುದಾಳಿಯನ್ನೂ ಅನುಮಾನಿಸುವ ಕಾಂಗ್ರೆಸ್‌ಗೆ ದೇಶದ ಭದ್ರತೆ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಆಪಾದಿಸಿದ ಅಮಿತ್‌ ಶಾ, ''ಉಗ್ರರಿಗೆ ಬೆಂಬಲವಾಗಿ ನಿಲ್ಲುವ ಕಾಶ್ಮೀರ ಪ್ರತ್ಯೇಕತಾವಾದಿಗಳ ಜತೆಗೆ ಸರಕಾರ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ. ಕಾಶ್ಮೀರ ಯಾವತ್ತಿದ್ದರೂ ನಮ್ಮದು. ಉಗ್ರರನ್ನು ಛೂ ಬಿಡುವ ಪಾಕಿಸ್ತಾನವನ್ನು ಸುಮ್ಮನೆ ಬಿಡುವುದಿಲ್ಲ. ಗುಂಡಿಗೆ ಗುಂಡಿನಿಂದಲೇ ಉತ್ತರ ಕೊಡುತ್ತೇವೆ. ಇದರಲ್ಲಿ ಕೇಂದ್ರದ ನಿಲುವು ಸ್ಪಷ್ಟವಾಗಿದೆ,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌