ಆ್ಯಪ್ನಗರ

ಪ್ರಚಾರಕ್ಕೆ ಬಂದರೆ ಹುಷಾರ್‌, ಸಿನಿಮಾ ನಟರ ಆಸ್ತಿ, ಅಂತಸ್ತಿನ ತನಿಖೆ ಆಗಬಹುದು: ಶಾಸಕ ಕೆ.ಸಿ.ನಾರಾಯಣಗೌಡ

ಹಣ ಕೊಟ್ಟು ಟಿಕೆಟ್ ಖರೀದಿ ನಾವು ಸಿನಿಮಾ ನೋಡುತ್ತಿರುವುದರಿಂದ ಅವರು ಸ್ಟಾರ್‌ಗಳಾಗಿ ಮೆರೆಯುತ್ತಿದ್ದಾರೆ. ಸಿನಿಮಾ ನಟರು ಒಬ್ಬ ವ್ಯಕ್ತಿಯ ಪರವಾಗಿ ರಾಜಕೀಯ ಪ್ರಚಾರ ನಡೆಸುವುದು ಸರಿಯಲ್ಲ. ಪ್ರಚಾರಕ್ಕೆ ಬಂದ್ರೆ ಹುಷಾರ್ ಎಂದು ಶಾಸಕರು ಎಚ್ಚರಿಕೆ ನೀಡಿದ್ದಾರೆ.

Vijaya Karnataka Web 19 Mar 2019, 9:36 pm
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸುಮಲತಾ ಅವರ ಬೆನ್ನಿಗೆ ನಿಂತಿರುವ ಚಿತ್ರನಟರಾದ ದರ್ಶನ್ ಮತ್ತು ಯಶ್ ಅವರಿಗೆ ‘ಆಸ್ತಿ ಅಂತಸ್ತಿನ ತನಿಖೆ’ ಆಗುವ ಸಾಧ್ಯತೆ ಇದೆ ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.
Vijaya Karnataka Web ಸುಮಲತಾ, ನಿಖಿಲ್‌
ಸುಮಲತಾ, ನಿಖಿಲ್‌


ಈ ಹಿಂದೆ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಸಚಿವ ಎಚ್.ಡಿ.ರೇವಣ್ಣ ಅವರು ವಿವಾದಿತ ಹೇಳಿಕೆಗಳನ್ನು ನೀಡಿದ್ದರು. ಇದೀಗ ಆ ಸಾಲಿಗೆ ಜೆಡಿಎಸ್ ಶಾಸಕ ಕೆ.ಸಿ.ನಾರಾಯಣಗೌಡ ಸೇರ್ಪಡೆಯಾಗಿದ್ದಾರೆ.

ಕೆ.ಆರ್.ಪೇಟೆಯಲ್ಲಿ ಮಂಗಳವಾರ ನಡೆದ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಸಿನಿಮಾ ನಟರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ನಮ್ಮ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಬಗ್ಗೆ ಮಾತನಾಡಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ನಿಮಗೂ ರಾಜಕಾರಣಕ್ಕೂ ಸಂಬಂಧವಿಲ್ಲ. ಸುಮ್ಮನೆ ಶೂಟಿಂಗ್ ಮಾಡಿ. ವಿನಾಕಾರಣ ಗೊಂದಲವನ್ನು ಹುಟ್ಟುಹಾಕಬಾರದು. ಇಲ್ಲದಿದ್ದರೆ ನಿಮ್ಮ ಆಸ್ತಿ ಅಂತಸ್ತಿನ ಬಗ್ಗೆ ತನಿಖೆ ಆರಂಭವಾಗಬಹುದು. ಸರಕಾರ ನಮ್ಮದಿದ್ದು, ಗೌರವದಿಂದ ಮನೆಯಲ್ಲಿರಿ ಎಂದಿದ್ದಾರೆ.

ಅಂಬರೀಷ್ ಅಣ್ಣನ ಬಗ್ಗೆ ನಮಗೆ ಗೌರವವಿದೆ. ಆದರೆ, ಸಿನಿಮಾ ಇಂಡಸ್ಟ್ರಿಯವರು ಹುಟ್ಟು ಹಾಕುತ್ತಿರುವುದು ಗೊಂದಲಗಳು ಆ ಸಿನಿಮಾ ಇಂಡಸ್ಟ್ರಿ ಮೇಲೆ ಪರಿಣಾಮ ಬೀರಲಿದೆ. ಸಿನಿಮಾ ಬಗ್ಗೆ ಮಾತನಾಡಲಿ, ಆದರೆ, ನಮ್ಮ ರಾಜಕಾರಣದಲ್ಲಿ ಮಧ್ಯ ಪ್ರವೇಶಿಸಬೇಡಿ. ನಾವು ಇರೋದ್ರಿಂದ ಅವರು ಸಿನಿಮಾ ಇಂಡಸ್ಟ್ರಿಯಲ್ಲಿದ್ದಾರೆ ಎಂದರು.

ಹಣ ಕೊಟ್ಟು ಟಿಕೆಟ್ ಖರೀದಿ ನಾವು ಸಿನಿಮಾ ನೋಡುತ್ತಿರುವುದರಿಂದ ಅವರು ಸ್ಟಾರ್‌ಗಳಾಗಿ ಮೆರೆಯುತ್ತಿದ್ದಾರೆ. ಸಿನಿಮಾ ನಟರು ಒಬ್ಬ ವ್ಯಕ್ತಿಯ ಪರವಾಗಿ ರಾಜಕೀಯ ಪ್ರಚಾರ ನಡೆಸುವುದು ಸರಿಯಲ್ಲ. ಪ್ರಚಾರಕ್ಕೆ ಬಂದ್ರೆ ಹುಷಾರ್ ಎಂದು ಶಾಸಕರು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಜನರು ಸ್ವಾಭಿಮಾನಿಗಳಾಗಬೇಕು. ಮಂಡ್ಯ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗಾಗಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಗೆಲುವು ಸಾಧಿಸಬೇಕು. ಕನಿಷ್ಠ 4 ಲಕ್ಷ ಮತಗಳ ಅಂತರದಿಂದ ನಿಖಿಲ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ