ಆ್ಯಪ್ನಗರ

ಮೋದಿ ವಿರುದ್ಧ ವಾರಾಣಸಿಯಿಂದ ನಾಮಪತ್ರ ಸಲ್ಲಿಸಲು ಹೊರಟ ತೆಲಂಗಾಣದ ರೈತರು

ಮೇ 19ರಂದು ವಾರಾಣಸಿಯಲ್ಲಿ ಮತದಾನ ನಡೆಯಲಿದೆ.

TOI.in 26 Apr 2019, 3:36 pm
ಹೈದರಾಬಾದ್‌: ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಲೋಕಸಭೆ ಕ್ಷೇತ್ರದಿಂದ 2ನೇ ಬಾರಿಗೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೇ ಕ್ಷೇತ್ರದಿಂದ ಮೋದಿ ವಿರುದ್ಧ ತೆಲಂಗಾಣದ ನಿಜಾಮಬಾದ್‌ನ 50 ಮಂದಿ ರೈತರು ನಾಮಪತ್ರ ಸಲ್ಲಿಸುತ್ತಿದ್ದಾರೆ.
Vijaya Karnataka Web Telangana Farmers


ರೈತರು ತಮ್ಮ ಸಮಸ್ಯೆಗಳನ್ನು ಮುನ್ನೆಲೆಗೆ ತರುವ ಉದ್ದೇಶದಿಂದ ಪ್ರಧಾನಿ ನರೋಂದ್ರ ಮೋದಿ ಅವರ ವಿರುದ್ಧ ವಾರಾಣಸಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿದ್ದಾರೆ.

ಅರಿಶಿಣ ಬೆಳೆಗೆ ಲಾಭದಾಯಕ ಬೆಲೆ ಮತ್ತು ಅರಿಶಿಣ ಮಂಡಳಿ ರಚನೆಗೆ ಆಗ್ರಹಿಸಿ ಸ್ಪರ್ಧೆಗೆ ಮುಂದಾಗಿರುವ ರೈತರ ತಂಡದ ಮುಖಂಡ ಗಂಗಾ ರೆಡ್ಡಿ, ತಮ್ಮ ತಂಡಲ್ಲಿ 52 ಮಂದಿಯಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರೈತರು ಜತೆಯಾಗಲಿದ್ದಾರೆ ಎಂದಿದ್ದಾರೆ.

ತಮಿಳುನಾಡಿನ ಅರಿಶಿಣ ಬೆಳೆಗಾರರು ವಾರಾಣಸಿ ತಲುಪಲಿದ್ದಾರೆ. ಬಿಜೆಪಿ ನೇತೃತ್ವದ ಸರಕಾರ ಅರಿಶಿಣ ಮಂಡಳಿ ರಚಿಸವಲ್ಲಿ ವಿಫಲವಾಗಿದೆ ಎಂದು ಗಂಗಾ ರೆಡ್ಡಿ ಆರೋಪಿಸಿದ್ದಾರೆ. ಏಪ್ರಿಲ್‌ 11ರಂದು ನಡೆದ ಮೊದಲ ಹಂತದ ಮತದಾನದಲ್ಲಿ ನಿಜಾಮಬಾದ್‌ ಲೋಕಸಭೆ ಕ್ಷೇತ್ರದಿಂದ ಕೆಲವು ಅರಿಶಿಣ ಬೆಳೆಗಾರರು ಸ್ಪರ್ಧಿಸಿದ್ದರು ಎಂಬ ಮಾಹಿತಿಯನ್ನು ಗಂಗಾ ರೆಡ್ಡಿ ನೀಡಿದ್ದಾರೆ.

ಮೇ 19ರಂದು ವಾರಾಣಸಿಯಲ್ಲಿ ಮತದಾನ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌