ಆ್ಯಪ್ನಗರ

ಮೋದಿಗೆ ಪಾಕ್ ಪ್ರಧಾನಿ ಸಂದೇಶ; ಶಾಂತಿ, ಪ್ರಗತಿ, ಸಮೃದ್ಧಿಗಾಗಿ ಕೈಜೋಡಿಸೋಣ!

ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಶುಭಾಶಯ ಸಂದೇಶವನ್ನು ರವಾನಿಸಿದ್ದಾರೆ. ಅಲ್ಲದೆ ಶಾಂತಿ,ಪ್ರಗತಿ ಹಾಗೂ ಸಮೃದ್ಧಿಗಾಗಿ ಜತೆಯಾಗಿ ಕೆಲಸ ನಿರ್ವಹಿಸಲು ಕರೆ ನೀಡಿದ್ದಾರೆ.

Vijaya Karnataka Web 23 May 2019, 5:49 pm
ಹೊಸದಿಲ್ಲಿ: ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಭಾರತ ಹಾಗೂ ಪಾಕಿಸ್ತಾನ ನಡುವೆ ಬಿಗುವಾದ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ, 2019 ಲೋಕಸಭಾ ಚುನಾವಣೆಯಲ್ಲಿ ಭಾರಿ ಗೆಲುವು ದಾಖಲಿಸಿರುವ ಭಾರತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಶುಭಾಯ ಸಂದೇಶವನ್ನು ರವಾನಿಸಿದ್ದಾರೆ.
Vijaya Karnataka Web imran-modi


ಅದೇ ಹೊತ್ತಿಗೆ ದಕ್ಷಿಣ ಏಷ್ಯಾದಲ್ಲಿ ಶಾಂತಿ, ಪ್ರಗತಿ ಹಾಗೂ ಸಮೃದ್ಧಿಗಾಗಿ ಕೈಜೋಡಿಸುವಂತೆ ನರೇಂದ್ರ ಮೋದಿಗೆ ಕರೆ ನೀಡಿದ್ದಾರೆ.

ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಾಕ್ ಉಗ್ರರ ನೆಲೆಯ ಮೇಲೆ ವೈಮಾನಿಕ ದಾಳಿಯನ್ನು ನಡೆಸಿತ್ತು.

ಏತನ್ಮಧ್ಯೆ ಚುನಾವಣಾ ಪೂರ್ವ ಹೇಳಿಕೆಯನ್ನು ನೀಡಿರುವ ಖಾನ್, ಶಾಂತಿ ಪರಿಸ್ಥಿತಿ ನೆಲೆಗೊಳ್ಳಲು ಮೋದಿ ಮಗದೊಮ್ಮೆ ಪ್ರಧಾನಿಯಾಗಬೇಕೆಂಬ ಅಚ್ಚರಿಯ ಹೇಳಿಕೆ ನೀಡಿದ್ದರು. ಇದೀಗ ಮೋದಿ ಎರಡನೇ ಬಾರಿಗೆ ಪ್ರಧಾನಿ ಹುದ್ದೆಗೇರುವುದು ಬಹುತೇಕ ಖಚಿತವೆನಿಸಿರುವ ಹಿನ್ನಲೆಯಲ್ಲಿ ಶುಭಾಶಯ ಸಂದೇಶವನ್ನು ತಿಳಿಸಿದ್ದಾರೆ.

ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪಾಕ್ ಜತೆ ದ್ವಿಪಕ್ಷೀಯ ಬಾಂಧವ್ಯವನ್ನು ವೃದ್ಧಿಸಿಕೊಳ್ಳಲಿದೆಯೇ ಅಥವಾ ಮತ್ತಷ್ಟು ಕಠಿಣ ಧೋರಣೆಗಳಿಗೆ ಮೋದಿ ಮುಂದಾಗಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ. ಈ ನಿಟ್ಟಿನಲ್ಲಿ ಮೋದಿ ರಾಜತಾಂತ್ರಿಕ ನೀತಿಯು ಹೆಚ್ಚಿನ ಕುತೂಹಲ ಮೂಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ