ಆ್ಯಪ್ನಗರ

ರಾಹುಲ್‌, ಪವಾರ್ ಜತೆ ಚಂದ್ರಬಾಬು ನಾಯ್ಡು ಮತ್ತೊಂದು ಸುತ್ತಿನ ಮಾತುಕತೆ

ಶುಕ್ರವಾರ ರಾಜಧಾನಿ ದಿಲ್ಲಿಗೆ ಆಗಮಿಸಿದ್ದ ನಾಯ್ಡು, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್‌ಸಿಪಿ ವರಿಷ್ಠ ಶರದ್ ಪವಾರ್‌, ಲೋಕತಾಂತ್ರಿಕ ಜನತಾ ದಳ ನಾಯಕ ಶರದ್ ಯಾದವ್ ಮತ್ತು ಸಿಪಿಐ ನಾಯಕರ ಜತೆ ಶನಿವಾರವೂ ಮಾತುಕತೆ ನಡೆಸಿದ್ದರು. ಬಳಿಕ ಲಖನೌಗೆ ತೆರಳಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಬಿಎಸ್‌ಪಿ ನಾಯಕಿ ಮಾಯಾವತಿ ಜತೆ ಚರ್ಚಿಸಿದರು. ಎನ್‌ಡಿಎ-ಯೇತರ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವನ್ನು ನಾಯ್ಡು ಮುಂದುವರಿಸಿದ್ದು, ಎನ್‌ಡಿಎಗೆ ಬಹುಮತ ದೊರೆಯದಿದ್ದರೆ ಸರಕಾರ ರಚಿಸುವ ಕಸರತ್ತು ನಡೆಸುತ್ತಿದ್ದಾರೆ.

Vijaya Karnataka Web 19 May 2019, 4:45 pm
ಹೊಸದಿಲ್ಲಿ: ಕೇಂದ್ರದಲ್ಲಿ ಬಿಜೆಪಿಯೇತರ ಸರಕಾರ ರಚಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭಾನುವಾರ ರಾಹುಲ್ ಗಾಂಧಿ ಮತ್ತು ಶರದ್ ಪವಾರ್ ಸೇರಿದಂತೆ ಪ್ರತಿಪಕ್ಷಗಳ ನಾಯಕರ ಜತೆ ಎರಡನೇ ಸುತ್ತಿನ ಮಾತುಕತೆ ನಡೆಸಿದರು.
Vijaya Karnataka Web Naidu-Rahul-Pawar


ಶುಕ್ರವಾರ ರಾಜಧಾನಿ ದಿಲ್ಲಿಗೆ ಆಗಮಿಸಿದ್ದ ನಾಯ್ಡು, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್‌ಸಿಪಿ ವರಿಷ್ಠ ಶರದ್ ಪವಾರ್‌, ಲೋಕತಾಂತ್ರಿಕ ಜನತಾ ದಳ ನಾಯಕ ಶರದ್ ಯಾದವ್ ಮತ್ತು ಸಿಪಿಐ ನಾಯಕರ ಜತೆ ಶನಿವಾರವೂ ಮಾತುಕತೆ ನಡೆಸಿದ್ದರು.

ಬಳಿಕ ಲಖನೌಗೆ ತೆರಳಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಬಿಎಸ್‌ಪಿ ನಾಯಕಿ ಮಾಯಾವತಿ ಜತೆ ಚರ್ಚಿಸಿದರು.

ಎನ್‌ಡಿಎ-ಯೇತರ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವನ್ನು ನಾಯ್ಡು ಮುಂದುವರಿಸಿದ್ದು, ಎನ್‌ಡಿಎಗೆ ಬಹುಮತ ದೊರೆಯದಿದ್ದರೆ ಸರಕಾರ ರಚಿಸುವ ಕಸರತ್ತು ನಡೆಸುತ್ತಿದ್ದಾರೆ.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಆಪ್‌ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಜತೆ ಈಗಾಗಲೇ ನಾಯ್ಡು ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಹಿಂದಿನ ಚುನಾವಣೆ ವೇಳೆ ಎನ್‌ಡಿಎ ಪಾಲುದಾರ ಪಕ್ಷವಾಗಿದ್ದ ಟಿಡಿಪಿ ಲೋಕಸಭಾ ಚುನಾವಣೆಗೆ ಕೆಲವು ತಿಂಗಳ ಹಿಂದೆ ಮೈತ್ರಿಕೂಟದಿಂದ ಹೊರಬಂದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ