ಆ್ಯಪ್ನಗರ

ವಾರಕ್ಕೊಮ್ಮೆ ಕೋರ್ಟ್‌ಗೆ ಹಾಜರಾಗಿ: ಪ್ರಜ್ಞಾಗೆ ಸೂಚನೆ

ಮಾಲೇಗಾಂವ್‌ ಸ್ಫೋಟ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳ ಗೈರು ಹಾಜರಿಗೆ ಅಸಮಾಧಾನ ವ್ಯಕ್ತಪಡಿಸಿದ ಕೋರ್ಟ್‌, ಮೇ 20ರಂದು ಮುಂದಿನ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

Vijaya Karnataka 18 May 2019, 5:00 am
ಮುಂಬೈ : ಭೋಪಾಲ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌, ಲೆ.ಕರ್ನಲ್‌ ಪ್ರಸಾದ್‌ ಪುರೋಹಿತ್‌ ಹಾಗೂ ಮಾಲೇಗಾಂವ್‌ ಸ್ಫೋಟ ಪ್ರಕರಣದ ಎಲ್ಲ ಆರೋಪಿಗಳು ಕನಿಷ್ಠ ವಾರಕ್ಕೊಮ್ಮೆ ಕೋರ್ಟ್‌ ಎದುರು ಹಾಜರಾಗುವಂತೆ ಎನ್‌ಐ ವಿಶೇಷ ನ್ಯಾಯಾಲಯ ಸೂಚಿಸಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳ ಗೈರು ಹಾಜರಿಗೆ ಅಸಮಾಧಾನ ವ್ಯಕ್ತಪಡಿಸಿದ ಕೋರ್ಟ್‌, ಮೇ 20ರಂದು ಮುಂದಿನ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಆರೋಪಿಗಳ ಪರ ವಕೀಲರು ಪ್ರತಿ ವಾರ ಮುಂಬೈಗೆ ಪ್ರಯಾಣ ಬೆಳೆಸಲು ಕಕ್ಷಿದಾರರಿಗೆ ಆಗುವುದಿಲ್ಲ ಎಂದಾಗ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತು.
Vijaya Karnataka Web malegaon blast special nia court asks pragya thakur other accused to attend court at least once a week
ವಾರಕ್ಕೊಮ್ಮೆ ಕೋರ್ಟ್‌ಗೆ ಹಾಜರಾಗಿ: ಪ್ರಜ್ಞಾಗೆ ಸೂಚನೆ


ವಿಚಾರಣೆಗೆ ಆರೋಪಿಗಳು ಹಾಜರಾಗಲು ವಿನಾಯಿತಿ ಕೇಳುವುದಕ್ಕೆ ಸೂಕ್ತ ಕಾರಣಗಳನ್ನು ಕೋರ್ಟ್‌ ಎದುರು ಇರಿಸಿ ಎಂದು ವಕೀಲರಿಗೆ ನ್ಯಾಯಪೀಠ ಸೂಚಿಸಿತು. ಮಹಾರಾಷ್ಟರದ ನಾಸಿಕ್‌ ಜಿಲ್ಲೆಯ ಮಾಲೇಗಾಂವ್‌ನಲ್ಲಿ ಮಸೀದಿ ಬಳಿ ಮೋಟಾರ್‌ ಸೈಕಲ್‌ಗೆ ಅಳವಡಿಸಲಾಗಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 6 ಮಂದಿ ಬಲಿಯಾಗಿದ್ದರು. ಬಂಧಿತ ಆರೋಪಿಯಾಗಿದ್ದ ಸಾಧ್ವಿ ಪ್ರಜ್ಞಾ ಸಿಂಗ್‌ಗೆ 2017ರಲ್ಲಿ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ