ಆ್ಯಪ್ನಗರ

ದೇಶ ವಿಭಜಕರಿಗೆ ಮಮತಾ ಬೆಂಬಲವೆಂದು ಶಾ ಆರೋಪ

''ಈಗ ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದಾರೆ ಮತ್ತು ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ. ಆದರೆ ಮುಂದೊಂದು ದಿನ ಬಿಜೆಪಿ ಅಧಿಕಾರದಿಂದ ನಿರ್ಗಮಿಸುವ ದಿನಗಳು ಬಂದರೂ ಆ ಬಗ್ಗೆ ತಲೆಕೆಡಿಸಿಕೊಳ್ಳದೇ ಕಾಶ್ಮೀರ ವಿಷಯದಲ್ಲಿನ ಹೋರಾಟವನ್ನು ಮುಂದುವರಿಸಲಾಗುವುದು,'' ಎಂದು ಸಾರಿದರು.

Vijaya Karnataka 2 May 2019, 5:00 am
ಕೋಲ್ಕೊತಾ: ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಿಸಲು ಬಯಸುತ್ತಿರುವ ದುರುಳರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಗಂಭೀರ ಆರೋಪ ಮಾಡಿದ್ದಾರೆ.
Vijaya Karnataka Web shah

ಬೋನ್‌ಗಾಂವ್‌ ಲೋಕಸಭೆ ಕ್ಷೇತ್ರದಲ್ಲಿ ಬುಧವಾರ ಚುನಾವಣಾ ರಾರ‍ಯಲಿ ಉದ್ದೇಶಿಸಿ ಮಾತನಾಡಿದ ಶಾ, ''ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ. ಅದನ್ನು ಪ್ರತ್ಯೇಕಿಸಲು ಯಾರಿಂದಲೂ ಸಾಧ್ಯವಿಲ್ಲ. ಅಂತಹ ಯತ್ನಗಳ ವಿರುದ್ಧದ ಬಿಜೆಪಿ ಹೋರಾಟ ಮುಂದುವರಿಯಲಿದೆ,'' ಎಂದರು.
''ಈಗ ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದಾರೆ ಮತ್ತು ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ. ಆದರೆ ಮುಂದೊಂದು ದಿನ ಬಿಜೆಪಿ ಅಧಿಕಾರದಿಂದ ನಿರ್ಗಮಿಸುವ ದಿನಗಳು ಬಂದರೂ ಆ ಬಗ್ಗೆ ತಲೆಕೆಡಿಸಿಕೊಳ್ಳದೇ ಕಾಶ್ಮೀರ ವಿಷಯದಲ್ಲಿನ ಹೋರಾಟವನ್ನು ಮುಂದುವರಿಸಲಾಗುವುದು,'' ಎಂದು ಸಾರಿದರು.
''ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್‌ ಅಬ್ದುಲ್ಲಾ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿದ್ದಾರೆ. ಅವರ ನಿಲುವನ್ನು ಮಮತಾ ಬ್ಯಾನರ್ಜಿ ಬೆಂಬಲಿಸಿದ್ದಾರೆ. ಆದರೆ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿ ಇರಬೇಕೋ ಬೇಡವೋ ಎನ್ನುವ ಬಗ್ಗೆ ತಮ್ಮ ನಿಲುವು ಏನು ಎನ್ನುವುದನ್ನು ಖಚಿತವಾಗಿ ಹೇಳಬೇಕು,'' ಎಂದು ಮಮತಾ ಅವರನ್ನು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌