ಆ್ಯಪ್ನಗರ

ಮತದಾರರ ಮುಂದೆ ಮಂಡಿಯೂರಿದ ಘಟಾನುಘಟಿಗಳು

ಮೋದಿ ಅಲೆಯ ಮುಂದೆ ಪ್ರತಿಪಕ್ಷಗಳ ಘಟಾನುಘಟಿ ನಾಯಕರೇ ಮಂಡಿಯೂರಿದ್ದಾರೆ. ಸೋತ ವರ್ಚಸ್ವಿ ನಾಯಕರಲ್ಲಿ ಬಿಜೆಪಿಯ ಜಯಪ್ರದಾ ಹೊರತು ಪಡಿಸಿದರೆ, ಉಳಿದವರೆಲ್ಲ ಬಿಜೆಪಿಯೇತರರೇ ಆಗಿದ್ದಾರೆ.

Vijaya Karnataka Web 23 May 2019, 11:08 pm
ಹೊಸದಿಲ್ಲಿ: 17ನೇ ಸಾರ್ವತ್ರಿಕ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ದೇಶದಲ್ಲೆಡೆ ಕಮಲವೇ ಅರಳಿ ನಿಂತಿದೆ.
Vijaya Karnataka Web jaya


ಮೋದಿ ಅಲೆಯ ಮುಂದೆ ಪ್ರತಿಪಕ್ಷಗಳ ಘಟಾನುಘಟಿ ನಾಯಕರೇ ಮಂಡಿಯೂರಿದ್ದಾರೆ. ಸೋತ ವರ್ಚಸ್ವಿ ನಾಯಕರಲ್ಲಿ ಬಿಜೆಪಿಯ ಜಯಪ್ರದಾ ಹೊರತು ಪಡಿಸಿದರೆ, ಉಳಿದವರೆಲ್ಲ ಬಿಜೆಪಿಯೇತರರೇ ಆಗಿದ್ದಾರೆ.

ಕರ್ನಾಟಕದಲ್ಲಿ ಮೋದಿ ಅಲೆಯಿಂದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಉಗ್ರಪ್ಪ, ಕೆ ಎಚ್ ಮುನಿಯಪ್ಪ, ಈಶ್ವರ್ ಖಂಡ್ರೆ, ಕೃಷ್ಣ ಭೈರೇಗೌಡ, ನಿಖಿಲ್ ಕುಮಾರಸ್ವಾಮಿ ಅಂತ ಘಟಾನುಘಟಿ ನಾಯಕರು ಹೀನಾಯ ಸೋಲು ಅನುಭವಿಸಿದ್ದಾರೆ.

ಹಾಗೆಯೇ ಅಮೇಠಿಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಎದುರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಂಡಿಯೂರಿದ್ದರೆ, ಭೋಪಾಲ ಕ್ಷೇತ್ರದಲ್ಲಿ ಪ್ರಜ್ಞಾ ಠಾಕೂರ್ ಎದುರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮಕಾಡೆ ಮಲಗಿದ್ದಾರೆ.

ಬಿಹಾರದ ಬೆಗುಸರಾಯ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಮುಖಂಡ ಕನ್ಹಯ್ಯ ಕುಮಾರ್ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರಿಂದ ಹೀನಾಯ ಸೋಲುಂಡಿದ್ದಾರೆ.

ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕಾಶ್ಮೀರದ ಅನಂತ್ ನಾಗ್ ಕ್ಷೇತ್ರದದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನ ಹಸ್ನೈನ್ ಮಸೂದಿ ಎದುರು ಹೀನಾಯ ಸೋಲು ಅನುಭವಿಸಿದ್ದಾರೆ.

ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ಧ ಕಾಂಗ್ರೆಸ್ ನಾಯಕ ಶತ್ರುಘ್ನ ಸಿನ್ಹಾ ಸೋಲುಂಡಿದ್ದರೆ, ಬಿಜೆಪಿಯ ಕೃಷ್ಣ ಪಾಲ್ ಸಿಂಗ್ ಎದುರು ಜ್ಯೋತಿರಾದಿತ್ಯಸಿಂಧ್ಯಾ ಮಂಡಿಯೂರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ