ಆ್ಯಪ್ನಗರ

ತರೂರ್‌ ವಿರುದ್ಧ ಸ್ಪರ್ಧಿಸಲು ಮಿಜೋರಾಂ ರಾಜ್ಯಪಾಲ ಹುದ್ಗೆ ರಾಜೀನಾಮೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಜತೆ ಸುದೀರ್ಘ ಕಾಲದಿಂದ ನಂಟು ಹೊಂದಿರುವ ರಾಜಶೇಖರನ್‌ ಅವರು 2018ರ ಮೇ 25ರಂದು ಮಿಜೋರಾಂನ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಕೇವಲ 10 ತಿಂಗಳಲ್ಲೇ ರಾಜ್ಯಪಾಲರ ಹುದ್ದೆಯನ್ನು ತ್ಯಜಿಸಿದ್ದಾರೆ.

Vijaya Karnataka 9 Mar 2019, 5:00 am
ತಿರುವನಂತಪುರಂ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಿಜೋರಾಂ ರಾಜ್ಯಪಾಲ ಕುಮ್ಮನಂ ರಾಜಶೇಖರನ್‌ ರಾಜೀನಾಮೆ ನೀಡಿದ್ದಾರೆ.
Vijaya Karnataka Web kummanam


ರಾಷ್ಟ್ರಪತಿ ರಾಮನಾಥ್‌ ಕೋವಿಂದ ಅವರು ರಾಜಶೇಖರನ್‌ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ. ಸದ್ಯ ಅಸ್ಸಾಂನ ರಾಜ್ಯಪಾಲ ಪೊ›. ಜಗದೀಶ್‌ ಮುಖಿ ಅವರಿಗೆ ಹೆಚ್ಚುವರಿಯಾಗಿ ಮಿಜೋರಾಂನ ರಾಜ್ಯಪಾಲರ ಹೊಣೆ ವಹಿಸಲಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಜತೆ ಸುದೀರ್ಘ ಕಾಲದಿಂದ ನಂಟು ಹೊಂದಿರುವ ರಾಜಶೇಖರನ್‌ ಅವರು 2018ರ ಮೇ 25ರಂದು ಮಿಜೋರಾಂನ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಕೇವಲ 10 ತಿಂಗಳಲ್ಲೇ ರಾಜ್ಯಪಾಲರ ಹುದ್ದೆಯನ್ನು ತ್ಯಜಿಸಿದ್ದಾರೆ.

ಕೇರಳ ಬಿಜೆಪಿ ಘಟಕದ ಮಾಜಿ ಅಧ್ಯಕ್ಷರೂ ಆಗಿರುವ ಕುಮ್ಮನಂ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ತಿರುವನಂತಪುರಂ ಕ್ಷೇತ್ರದಿಂದ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌ ವಿರುದ್ಧ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ