ಆ್ಯಪ್ನಗರ

ಮೋದಿ ಮತ್ತೆ ಪ್ರಧಾನಿಯಾಗಲೆಂದ ರಾಜ್ಯಪಾಲ ಕಲ್ಯಾಣ್‌ ಸಿಂಗ್‌!

ಉತ್ತರ ಪ್ರದೇಶದ ಬಿಜೆಪಿ ಕಾರ್ಯಕರ್ತರ ನಿಯೋಗವೊಂದು ಅವರನ್ನು ಭೇಟಿ ಮಾಡಿ ಅಲಿಗಢ ಕ್ಷೇತ್ರದ ಅಭ್ಯರ್ಥಿ ವಿರುದ್ಧ ಅಸಮಾಧಾನ ತೋಡಿಕೊಂಡಿತ್ತು.

Vijaya Karnataka 26 Mar 2019, 5:00 am
ಜೈಪುರ: ರಾಜಸ್ಥಾನದ ರಾಜ್ಯಪಾಲ ಕಲ್ಯಾಣ್‌ ಸಿಂಗ್‌ ಅವರು, ''ನರೇಂದ್ರ ಮೋದಿ ಮತ್ತೊಂದು ಅವಧಿಗೆ ಪ್ರಧಾನಿ ಆಗಬೇಕು. ನಾವೆಲ್ಲ ಬಿಜೆಪಿ ಕಾರ್ಯಕರ್ತರು,'' ಎಂ¨ದು ಹೇಳಿದ ಮಾತು ವಿವಾದ ಸೃಷ್ಟಿಸಿದೆ.
Vijaya Karnataka Web kalyan


ಉತ್ತರ ಪ್ರದೇಶದ ಬಿಜೆಪಿ ಕಾರ್ಯಕರ್ತರ ನಿಯೋಗವೊಂದು ಅವರನ್ನು ಭೇಟಿ ಮಾಡಿ ಅಲಿಗಢ ಕ್ಷೇತ್ರದ ಅಭ್ಯರ್ಥಿ ವಿರುದ್ಧ ಅಸಮಾಧಾನ ತೋಡಿಕೊಂಡಿತ್ತು. ಅವರನ್ನು ಸಮಾಧಾನಿಸುವ ವೇಳೆ ಕಲ್ಯಾಣ್‌ ಸಿಂಗ್‌ ಅವರು, ''ನಾವೆಲ್ಲರೂ ಬಿಜೆಪಿ ಕಾರ್ಯಕರ್ತರು. ಬಿಜೆಪಿ ಮತ್ತೊಮ್ಮೆ ಲೋಕಸಭೆ ಚುನಾವಣೆ ಗೆಲ್ಲಬೇಕು ಎನ್ನುವುದು ನಮ್ಮ ಹಂಬಲ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು. ಅವರು ಪ್ರಧಾನಿ ಆಗಿ ಮರು ಆಯ್ಕೆ ಮಾಡುವುದು ರಾಷ್ಟ್ರ ಹಾಗೂ ಸಮಾಜದ ಹಿತದೃಷ್ಟಿಯಿಂದ ತುಂಬ ಮುಖ್ಯ,'' ಎಂದು ಹೇಳಿದ್ದಾರೆ. ಈ ಹೇಳಿಕೆಯ ವಿಡಿಯೋ ಈಗ ವೈರಲ್‌ ಆಗಿದ್ದು, ವಿವಾದ ಸೃಷ್ಟಿಸಿದೆ.

ರಾಜಕೀಯ ಧೋರಣೆಗಳಿಂದ ಮುಕ್ತವಾಗಿ ಇರಬೇಕಾದ ರಾಜ್ಯಪಾಲರು ಈ ರೀತಿ ಒಂದು ಪಕ್ಷದ ಪರ ವಕಾಲತ್ತು ವಹಿಸಿ ಮಾತಾಡಿರುವುದು ಪ್ರತಿಪಕ್ಷಗಳ ತೀವ್ರ ಅಸಮಾಧಾನಕ್ಕೆ ಎಡೆಮಾಡಿಕೊಟ್ಟಿದೆ. ರಾಜ್ಯಪಾಲ ಹುದ್ದೆ ಸಂವಿಧಾನಾತ್ಮಕ ಸವಲತ್ತುಗಳನ್ನು ಹೊಂದಿದ್ದು ಯಾವುದೇ ಪಕ್ಷದ ಪರ ವಾಲಬಾರದು. ಕಲ್ಯಾಣ್‌ ಸಿಂಗ್‌ ತಮ್ಮ ಹುದ್ದೆಯ ಘನತೆ ಮೀರಿ ಮಾತಾಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌