ಆ್ಯಪ್ನಗರ

ಚುನಾವಣೆ ಸಂದರ್ಭ ಪೊಲೀಸ್ ವಾಹನದಲ್ಲಿ ಹಣ ಸಾಗಣೆ: ಆಯೋಗಕ್ಕೆ ಬಿಜೆಪಿ ದೂರು

ಕರ್ನಾಟಕದಲ್ಲಿರುವ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರಕಾರ ಶತಾಯ ಗತಾಯ ಚುನಾವಣೆಯಲ್ಲಿ ಗೆಲ್ಲಲು ಎಲ್ಲ ರೀತಿಯ ತಂತ್ರಗಳನ್ನು ಬಳಸಿದೆ. ಸರಕಾರಿ ವಾಹನಗಳನ್ನು ಹಣ ಸಾಗಣೆಗೆ ಬಳಸಿರುವುದು ಗಂಭೀರವಾದ ಅಪರಾಧವಾಗಿದೆ.

Vijaya Karnataka Web 9 May 2019, 3:28 pm
ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪೊಲೀಸ್‌ ವಾಹನದಲ್ಲಿಯೇ ಹಣ ಸಾಗಣೆಯಾಗಿರುವ ಕುರಿತು ತನಿಖೆ ನಡೆಸಬೇಕೆಂದು ಕೋರಿ ಬಿಜೆಪಿ ದೂರು ಸಲ್ಲಿಸಿದೆ.
Vijaya Karnataka Web ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ
ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ


ಹಣ ಸಾಗಿಸಲು ಸರಕಾರದ ವಾಹನವನ್ನೇ ಬಳಸಿಕೊಳ್ಳಲಾಗಿತ್ತು. ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾಗಿತ್ತು. ಆರ್ ಟಿಒ ದಾಖಲೆಗಳ ಪ್ರಕಾರ ಈ ವಾಹನ ಪೊಲೀಸ್ ಇಲಾಖೆಗೆ ಸೇರಿದ್ದು ಎಂಬುದು ಸ್ಪಷ್ಟವಾಗಿದೆ. ಇದು ಆಡಳಿತ ಯಂತ್ರದ ಗಂಭೀರ ದುರುಪಯೋಗ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಕೋರಿ ಕೇಂದ್ರ ಚುನಾವಣ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

ಬಿಜೆಪಿ ಮುಖಂಡರಾದ ಮುರಳೀಧರ್‌ ರಾವ್‌, ರಾಜೀವ್‌ ಚಂದ್ರಶೇಖರ್‌, ಅರವಿಂದ ಲಿಂಬಾವಳಿ ಕೇಂದ್ರ ಚುನಾವಣೆ ಆಯೋಗಕ್ಕೆ ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿರುವ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರಕಾರ ಶತಾಯ ಗತಾಯ ಚುನಾವಣೆಯಲ್ಲಿ ಗೆಲ್ಲಲು ಎಲ್ಲ ರೀತಿಯ ತಂತ್ರಗಳನ್ನು ಬಳಸಿದೆ. ಸರಕಾರಿ ವಾಹನಗಳನ್ನು ಹಣ ಸಾಗಣೆಗೆ ಬಳಸಿರುವುದು ಗಂಭೀರವಾದ ಅಪರಾಧವಾಗಿದೆ. ಇದು ಪಾರದರ್ಶನಕ ಚುನಾವಣೆ ನಡೆಸಬೇಕೆಂಬ ಚುನಾವಣೆ ಆಯೋಗದ ಆಶಯಕ್ಕೂ ಧಕ್ಕೆ ಉಂಟಾಗಿದೆ. ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಸೂಕ್ರ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ತನ್ನ ದೂರಿನಲ್ಲಿ ಮನವಿ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ