ಆ್ಯಪ್ನಗರ

ಕಳಪೆ ಫಲಿತಾಂಶ: ಹೃದಯಾಘಾತದಿಂದ ಕಾಂಗ್ರೆಸ್ ನಾಯಕ ಸಾವು

ಫಲಿತಾಂಶದ ಆಘಾತದಿಂದ ಕಾಂಗ್ರೆಸ್ ನಾಯಕ ರತನ್ ಸಿಂಗ್‌ಗೆ ಹೃದಯಾಘಾತ ಸಂಭವಿಸಿದ್ದು, ಸಾವಗೀಡಾಗಿದ್ದಾರೆ ಎಂದು ವರದಿಯಾಗಿದೆ.

TIMESOFINDIA.COM 23 May 2019, 6:08 pm
ಭೋಪಾಲ: ದುರಂತ ಘಟನೆಯೊಂದರಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ಕೇಂದ್ರದಲ್ಲಿಯೇ ಮಧ್ಯ ಪ್ರದೇಶದ ಸೆಹೊರೆ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
Vijaya Karnataka Web Congress


ಫಲಿತಾಂಶದ ಆಘಾತದಿಂದ ಕಾಂಗ್ರೆಸ್ ನಾಯಕ ರತನ್ ಸಿಂಗ್‌ಗೆ ಹೃದಯಾಘಾತ ಸಂಭವಿಸಿದ್ದು, ಸಾವಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಮತ ಎಣಿಕೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಉತ್ಸಾಹದಿಂದಲೇ ಮತ ಎಣಿಕೆ ಕೇಂದ್ರಕ್ಕೆ ತೆರಳಿದ್ದ ರತನ್ ಸಿಂಗ್, ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಪಡೆಯುತ್ತಿದ್ದರು. ಆದರೆ, ಮತ ಎಣಿಕೆ ಮುಂದುವರೆಯುತ್ತಿದ್ದಂತೆ ಕಾಂಗ್ರೆಸ್ ಕಳಪೆ ಸಾಧನೆಯಿಂದ ಆಘಾತಕ್ಕೊಳಗಾಗಿದ್ದರು. ಈ ವೇಳೆಯೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎಂದು ಹೇಳಲಾಗುತ್ತಿದೆ.

ಮತ ಎಣಿಕೆ ಕೇಂದ್ರದಲ್ಲಿಯೇ ಕುಸಿದು ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಭರ್ಜರಿ ಜಯದತ್ತ ಎನ್‌ಡಿಎ

ದೇಶದ 542 ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಬಿಜೆಪಿ ಭರ್ಜರಿ ಬಹುಮತದೊಂದಿಗೆ ಸತತ ಎರಡನೇ ಬಾರಿ ಅಧಿಕಾರಕ್ಕೇರಲು ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ನೇತೃತ್ವದಲ್ಲಿ ಭಾರೀ ಜನಾದೇಶ ಪಡೆದ ಬಿಜೆಪಿ ನೇತೃತ್ವದ ಎನ್‌ಡಿಎ ಹೊಸ ಸರಕಾರ ರಚನೆಗೆ ಸಜ್ಜಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌