ಆ್ಯಪ್ನಗರ

ಇದು ಜನತಾ ಜನಾರ್ದನರ ವಿಜಯ: ವಿಜಯೋತ್ಸವದಲ್ಲಿ ಮೋದಿ ಹೇಳಿಕೆ

ಹೊಸದಿಲ್ಲಿಯ ಲೋಕ ಕಲ್ಯಾಣ್‌ ಮಾರ್ಗದಲ್ಲಿರುವ ಬಿಜೆಪಿ ಮುಖ್ಯ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಅಭೂತಪೂರ್ವ ಸ್ವಾಗತ ಕೋರಲಾಯಿತು.

Vijaya Karnataka Web 23 May 2019, 8:49 pm
ಹೊಸದಿಲ್ಲಿ: ಇಡೀ ವಿಶ್ವಕ್ಕೆ ಪ್ರಜಾಪ್ರಭುತ್ವದ ಈ ಹಬ್ಬ ಮಾದರಿಯಾಗಿದೆ. ಇದನ್ನು ಯಶಸ್ವಿ ಮಾಡಿದ ಜನತಾ ಜನಾರ್ದನರಿಗೆ ನಮೋ ನಮಃ, ಇಲ್ಲಿ ಯಾರಾದರೂ ಗೆದ್ದಿದ್ದಾರೆ ಅಂದು ಜನತಾ ಜನಾರ್ದನರ ವಿಜಯ, ಇದು ಲೋಕತಂತ್ರದ ಜಯ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
Vijaya Karnataka Web ನರೇಂದ್ರ ಮೋದಿ
ನರೇಂದ್ರ ಮೋದಿ


ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಗಳಿಸಿ ಬಿಜೆಪಿಯ ವಿಜಯೋತ್ಸವ ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಆಚರಿಸಲಾಯಿತು.

ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ನರೇಂದ್ರ ಮೋದಿ ಭಾಷಣ ಮಾಡಿದರು.

ಬಿಜೆಪಿಯ ನಿಜಕ್ಕೂ ಅದೃಷ್ಟ ಎಂದರೆ ನಮ್ಮಲ್ಲಿರುವ ಕೋಟಿ ಕೋಟಿ ಕಾರ್ಯಕರ್ತರ ಮನದಲ್ಲಿರುವುದು ಕೇವಲ ಭಾರತ ಮಾತೆ, ಭಾರತ ಮಾತೆ. ಇದು ಮೆಚ್ಚುಗೆ ವಿಷಯ ಎಂದು ಮೋದಿ ಹೇಳಿದರು.

ಕೆಲವು ದಶಕಗಳ ಹಿಂದೆ ನಮ್ಮದು ಎರಡು ಸ್ಥಾನ ಇತ್ತು. ಆದರೆ ಈಗ ಎರಡನೇ ಬಾರಿಯೂ ನಾವು ಅಧಿಕಾರಕ್ಕೆ ಬಂದಿದ್ದೇವೆ. ಎರಡು ಸ್ಥಾನ ಇದ್ದಾಗ ನಾವು ನಿರಾಶರಾಗಿರಲಿಲ್ಲ. ಈಗ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದರೂ ನಮ್ಮ ಆಶಯ, ನಮ್ರತೆ, ವಿನಯತೆ, ಧೋರಣೆ, ಸಿದ್ಧಾಂತಗಳನ್ನು ಮರೆತಿಲ್ಲ, ಮರೆಯುವುದಿಲ್ಲ ಎಂದು ಮೋದಿ ಹೇಳುತ್ತಿದ್ದಂತೆ ಮೋದಿ ಮೋದಿ ಮೋದಿ ಘೋಷಣೆ ಮುಗಿಲು ಮುಟ್ಟಿತು.

ನಾನು ಏನೇ ಮಾಡಿದರೂ ಅಭಿವೃದ್ಧಿಗಾಗಿ ಮಾಡುತ್ತೇನೆ. ಈ ರೀತಿಯ ಜನರು ನಮ್ಮ ಮೇಲೆ ವಿಶ್ವಾಸ ಇಟ್ಟಿರುವುದುನ್ನು ಎಂದಿಗೂ ಮರೆಯುವುದಿಲ್ಲ. ನಾನು ಯಾವುದನ್ನೂ ಮರೆಯುವುದಿಲ್ಲ. ಜನರ ಸೇವೆಗಾಗಿಯೇ ನನ್ನ ಜೀವನ ಮುಡಿಪು ಎಂದು ಮೋದಿ ತಿಳಿಸಿದರು.

ಇಂದು ಬಿಜೆಪಿಯ ವಿಜಯೋತ್ಸವದಲ್ಲಿ ಪಾಲ್ಗೊಳ್ಳು ಸ್ವಯಂ ಮೇಘರಾಜ ಮಳೆಯನ್ನು ಧರೆಗೆ ತಂದಿದ್ದಾನೆ ಎಂದರು.

ಭಾರತದ 130 ಕೋಟಿ ಜನರಿಗೆ ಶಿರ ಬಾಗಿ ನಮಿಸುತ್ತೇನೆ. ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದು ಅತಿ ದೊಡ್ಡ ಹಬ್ಬವಾಗಿದೆ. ಇಡೀ ಚುನಾವಣೆಯ ಇತಿಹಾಸದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮತದಾನವಾಗಿದೆ. ಅದು 35 ರಿಂದ 40ರಷ್ಟು ಡಿಗ್ರಿ ಸೆಲ್ಷಿಯಸ್‌ ತಾಪಮಾನ ಇದ್ದರೂ ಸ್ವಯಂ ಪ್ರೇರಿತರಾಗಿ ನಾಗರಿಕರು ಬಂದು ಮತದಾನ ಮಾಡಿರುವುದು ನಿಜಕ್ಕೂ ಅಭಿನಂದನಾರ್ಹ ಎಂದರು.

ಹೊಸದಿಲ್ಲಿಯ ಲೋಕ ಕಲ್ಯಾಣ್‌ ಮಾರ್ಗದಲ್ಲಿರುವ ಬಿಜೆಪಿ ಮುಖ್ಯ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಅಭೂತಪೂರ್ವ ಸ್ವಾಗತ ಕೋರಲಾಯಿತು.

ಬಿಜೆಪಿ ಮುಖ್ಯ ಕಚೇರಿ ಬಳಿ ಸಾವಿರಾರು ಕಾರ್ಯಕರ್ತರು ಸೇರಿದ್ದು, ವರಿಷ್ಠ ನಾಯಕರ ಜತೆ ಬಿಜೆಪಿ ವಿಜಯೋತ್ಸವದಲ್ಲಿ ಪಾಲ್ಗೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌