ಆ್ಯಪ್ನಗರ

ಈಶಾನ್ಯ ಭಾರತದಲ್ಲಿ ಶಾಂತಿ & ಅಭಿವೃದ್ಧಿ ತಂದಿದ್ದೇ ಬಿಜೆಪಿ: ಅಮಿತ್‌ ಶಾ

​​ಈಶಾನ್ಯ ರಾಜ್ಯಗಳ ಕೌನ್ಸಿಲ್‌ ಸಭೆಯಲ್ಲಿ ಭಾಗವಹಿಸಿದ್ದ ಮೊರಾರ್ಜಿ ದೇಸಾಯಿ ಕೊನೆಯ ಪ್ರಧಾನಿ. ಅದಾದ 40 ವರ್ಷಗಳ ನಂತರ ಶಿಲ್ಲಾಂಗ್‌ ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಎಂದರೆ ನರೇಂದ್ರ ಮೋದಿ ಎಂದು ಅಮಿತ್‌ ಶಾ ಹೇಳಿದ್ದಾರೆ.

PTI 5 Apr 2019, 3:13 pm
ಛಾಂಗ್‌ಲಾಂಗ್‌: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಈಶಾನ್ಯ ಭಾರತದಲ್ಲಿ ಶಾಂತಿ ಮತ್ತು ಅಭಿವೃದ್ಧಿಯನ್ನು ತಂದಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.
Vijaya Karnataka Web narendra modi led govt has ensured peace and development in northeast bjp president amit shah
ಈಶಾನ್ಯ ಭಾರತದಲ್ಲಿ ಶಾಂತಿ & ಅಭಿವೃದ್ಧಿ ತಂದಿದ್ದೇ ಬಿಜೆಪಿ: ಅಮಿತ್‌ ಶಾ


5 ವರ್ಷಗಳ ಹಿಂದಷ್ಟೇ ಉಗ್ರಗಾಮಿ ಚಟುವಟಿಗಳು ಈಶಾನ್ಯ ರಾಜ್ಯಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿತ್ತು. ಇದರಿಂದ ಶಾಂತಿ ಮತ್ತು ಅಭಿವೃದ್ಧಿಗೆ ತೊಡಕಾಗಿತ್ತು. ಈಶಾನ್ಯ ರಾಜ್ಯಗಳಲ್ಲಿ ಗಡಿಮೀರಿ ಉಗ್ರವಾದಿ ಚಟುವಟಿಕೆ ನಡೆಸುತ್ತಿದ್ದವರನ್ನು ಹಿಮ್ಮೆಟ್ಟಿಸುವಲ್ಲಿ ಬಿಜೆಪಿ ಕಠಿಣ ಕ್ರಮ ಕೈಗೊಂಡಿತು. ಅರುಣಾಚಲ ಪ್ರದೇಶದಲ್ಲಿ ಕೆಸರಿ ಪಡೆ ಅಧಿಕಾರಕ್ಕೆ ಬಂದ ನಂತರ ಸ್ಥಿರತೆ ವಾಪಾಸ್‌ ಬಂದಿದೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ.

ಈಶಾನ್ಯದ ರಾಜ್ಯಗಳ ಜತೆ ವಾಯು ಮತ್ತು ರೈಲು ಮಾರ್ಗವಾಗಿ ಸಂಪರ್ಕ ಸಿಕ್ಕಿದೆ. ಅರುಣಾಚಲ ಪ್ರದೇಶವೊಂದಕ್ಕೆ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರಕಾರ 50,000 ಕೋಟಿ ರೂ.ಅನುದಾನ ನೀಡಲಾಗಿದೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ.

ಈಶಾನ್ಯ ರಾಜ್ಯಗಳ ಕೌನ್ಸಿಲ್‌ ಸಭೆಯಲ್ಲಿ ಭಾಗವಹಿಸಿದ್ದ ಮೊರಾರ್ಜಿ ದೇಸಾಯಿ ಕೊನೆಯ ಪ್ರಧಾನಿ. ಅದಾದ 40 ವರ್ಷಗಳ ನಂತರ ಶಿಲ್ಲಾಂಗ್‌ ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಎಂದರೆ ನರೇಂದ್ರ ಮೋದಿ ಎಂದು ಅಮಿತ್‌ ಶಾ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌