ಆ್ಯಪ್ನಗರ

ಮಂಡ್ಯಕ್ಕೆ ನಿಖಿಲ್‌ ಮೈತ್ರಿ ಅಭ್ಯರ್ಥಿ ಘೋಷಣೆ: ಸಮಾವೇಶಕ್ಕೆ ಕಾಂಗ್ರೆಸ್‌ ಮುಖಂಡರ ಸಾಮೂಹಿಕ ಗೈರು

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ನಿಖಿಲ್‌ ಕುಮಾರಸ್ವಾಮಿ ಎಂದು ಘೋಷಿಸಲು ಆಯೋಜಿಸಲಾಗಿದ್ದ ಸಮಾವೇಶಕ್ಕೆ ಕಾಂಗ್ರೆಸ್‌ ಮುಖಂಡರು ಸಾಮೂಹಿಕ ಗೈರು ಹಾಜರಾಗಿದ್ದರು.

Vijaya Karnataka Web 14 Mar 2019, 5:09 pm
ಮಂಡ್ಯ : ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಅಧಿಕೃತ ಅಭ್ಯರ್ಥಿ ಎಂದು ಮಂಡ್ಯ ಉಸ್ತುವಾರಿ ಸಚಿವ ಸಿ.ಎಸ್ ಪುಟ್ಟರಾಜು ಘೋಷಣೆ‌ ಮಾಡಿದರು.
Vijaya Karnataka Web ನಿಖಿಲ್‌ ಕುಮಾರಸ್ವಾಮಿ
ನಿಖಿಲ್‌ ಕುಮಾರಸ್ವಾಮಿ


ಮಂಡ್ಯ ಸಮಾವೇಶ ಆರಂಭಕ್ಕೂ ಮುನ್ನವೇ ಘೋಷಣೆ ಮಾಡಿ, ಮಂಡ್ಯ ಜಿಲ್ಲೆಯಲ್ಲಿ ಶಾಸಕರನ್ನು ಗೆಲ್ಲಿಸಿದಂತೆ ನಿಖಿಲ್ ಕುಮಾರಸ್ವಾಮಿಯನ್ನು ಗೆಲ್ಲಿಸುವಂತೆಯೂ ಮನವಿ ಮಾಡಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ನಿಖಿಲ್‌ ಕುಮಾರಸ್ವಾಮಿ ಎಂದು ಘೋಷಿಸಲು ಆಯೋಜಿಸಲಾಗಿದ್ದ ಸಮಾವೇಶಕ್ಕೆ ಕಾಂಗ್ರೆಸ್‌ ಮುಖಂಡರು ಸಾಮೂಹಿಕ ಗೈರು ಹಾಜರಾಗಿದ್ದರು.

ಸಮಾವೇಶದಲ್ಲಿ ಕಾಂಗ್ರೆಸ್ ಪ್ರತಿನಿಧಿಯಾಗಿ ಆಗಮಿಸಿದ ಅಮರಾವತಿ ಚಂದ್ರಶೇಖರ್ ತಮ್ಮ ಅಶ್ವಥ್ ಮಾತ್ರ ಆಗಮಿಸಿದರು.

ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಶುಭ ಕೋರಿ ಸೆಲ್ಫಿ ತೆಗೆದುಕೊಂಡು ವೇದಿಕೆಯಲ್ಲಿ ಕುಳಿತರು ಅಶ್ವಥ್. ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಅಶ್ವಥ್.
ದಿವಂಗತ ಡಾ.ಅಂಬರೀಶ್ ಆತ್ಮೀಯರು ಕೂಡ ಹೌದು. ಸದ್ಯ ಕಾಂಗ್ರೆಸ್ ಸಕ್ರಿಯ ಮುಖಂಡರಾಗಿರುವ ಅಶ್ವಥ್ ಸಮಾವೇಶಕ್ಕೆ ಹಾಜರಾದ ಏಕೈಕ ಕಾಂಗ್ರೆಸ್‌ ನಾಯಕರಾಗಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಸೇರಿದಂತೆ ಜಿಲ್ಲೆಯ ಹಲವಾರು ಕಾಂಗ್ರೆಸ್ಸಿಗರು ಗೈರು ಹಾಜರಾಗಿದ್ದು ಜೆಡಿಎಸ್‌ಗೆ ಮುಖಭಂಗವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌