ಆ್ಯಪ್ನಗರ

ದಿಲ್ಲಿಯಲ್ಲಿಲ್ಲ ಆಪ್‌-ಕಾಂಗ್ರೆಸ್‌ ಮೈತ್ರಿ; ತ್ರಿಕೋನ ಸ್ಪರ್ಧೆಗೆ ಅಣಿ

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧ ಪಡಿಸುತ್ತಿದ್ದು, ಮಾಜಿ ಕೇಂದ್ರ ಸಚಿವ ಅಜಯ್‌ ಮಾಕನ್‌, ಮಾಜಿ ಸಿಎಂ ಶೀಲಾ ದೀಕ್ಷಿತ್‌, ಕುಸ್ತಿಪಟು ಸುಶೀಲ್‌ ಕುಮಾರ್‌, ಅರವಿಂದರ್‌ ಸಿಂಗ್‌ ಲೊವೆಲಿ, ರಮೇಶ್‌ ಕುಮಾರ್‌, ರಾಜ್‌ಕುಮಾರ್‌ ಚೌಹಾಣ್‌ ಮತ್ತು ಜೆಪಿ ಅಗರ್‌ವಾಲ್‌ ಅವರ ಹೆಸರುಗಳು ಕೇಳಿ ಬರುತ್ತಿವೆ.

Times Now 21 Apr 2019, 1:09 pm
ಹೊಸದಿಲ್ಲಿ: ಲೋಕಸಭೆ ಚುನಾವಣೆ 2019ರಲ್ಲಿ ಚುನಾವಣೆ ಪೂರ್ವ ಮೈತ್ರಿಗಾಗಿ ಕಾಂಗ್ರೆಸ್‌ ಮತ್ತು ಆಮ್‌ ಆದ್ಮಿ ಪಕ್ಷಗಳ ನಡುವೆ ತೆರೆಮರೆಯ ಪ್ರಯತ್ನಗಳು ನಡೆಯಿತಾದರೂ, ಕೊನೆಗೆ ಮೈತ್ರಿಯಿಲ್ಲ ಎಂಬುದನ್ನು ಕಾಂಗ್ರೆಸ್‌ ಹಿರಿಯ ನಾಯಕಿ ಶೀಲಾ ದೀಕ್ಷಿತ್‌ ಸ್ಪಷ್ಟ ಪಡಿಸಿದ್ದಾರೆ.
Vijaya Karnataka Web Sheila Dikshit


ಮುಂದಿನ ಕೆಲವು ದಿನಗಳಲ್ಲೇ ರಾಷ್ಟ್ರ ರಾಜಧಾನಿಯ 7 ಲೋಕಸಭೆ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಾಗಿ ಶೀಲಾ ದೀಕ್ಷಿತ್‌ ಘೋಷಿಸಿದ್ದಾರೆ. ಇದರೊಂದಿಗೆ ದಿಲ್ಲಿಯಲ್ಲಿ ಬಿಜೆಪಿ, ಕಾಂಗ್ರೆಸ್‌ ಮತ್ತು ಆಮ್‌ ಆದ್ಮಿ ಪಕ್ಷದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಂತಾಗಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ, ನಮಗೂ ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳುವ ಆಸಕ್ತಿಯಿಲ್ಲ. ದಿಲ್ಲಿಯಲ್ಲಿ ಎಎಪಿ ಪ್ರಬಲವಾಗಿದ್ದು, ಸ್ವಂತ ಬಲದಲ್ಲಿ ಎಲ್ಲಾ 7 ಲೋಕಸಭೆ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದೆ. ಕಾಂಗ್ರೆಸ್‌ಗೆ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದರು.

ಈಗಾಗಲೇ ಆಮ್‌ ಆದ್ಮಿ ಪಕ್ಷ ತನ್ನ 7 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧ ಪಡಿಸುತ್ತಿದ್ದು, ಮಾಜಿ ಕೇಂದ್ರ ಸಚಿವ ಅಜಯ್‌ ಮಾಕನ್‌, ಮಾಜಿ ಸಿಎಂ ಶೀಲಾ ದೀಕ್ಷಿತ್‌, ಕುಸ್ತಿಪಟು ಸುಶೀಲ್‌ ಕುಮಾರ್‌, ಅರವಿಂದರ್‌ ಸಿಂಗ್‌ ಲೊವೆಲಿ, ರಮೇಶ್‌ ಕುಮಾರ್‌, ರಾಜ್‌ಕುಮಾರ್‌ ಚೌಹಾಣ್‌ ಮತ್ತು ಜೆಪಿ ಅಗರ್‌ವಾಲ್‌ ಅವರ ಹೆಸರುಗಳು ಕೇಳಿ ಬರುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ