ಆ್ಯಪ್ನಗರ

ಮುಂದಿನ 25 ವರ್ಷಗಳ ಕಾಲ ಮೋದಿಗೆ ಎದುರಾಳಿ ಯಾರೂ ಇಲ್ಲ: ಶಿವಸೇನೆ

ಮುಂದಿನ 25 ವರ್ಷಗಳ ಕಾಲ ಅವರನ್ನು ಎದುರಿಸಬಲ್ಲ ನಾಯಕ ಯಾರೂ ಇರಲಾರರು ಎಂದು ಶಿವಸೇನೆ ಹೇಳಿದೆ. ಕಳೆದ ಐದು ವರ್ಷಗಳಲ್ಲಿ ಹಲವು ಬಾರಿ ಬಿಜೆಪಿಯನ್ನು ಟೀಕಿಸಿದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಕೊನೆಗೂ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿತ್ತು.

Vijaya Karnataka Web 23 May 2019, 5:47 pm
ಹೊಸದಿಲ್ಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಭಾರೀ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಸೇನೆ ಹಾಡಿಹೊಗಳಿದೆ. ಮುಂದಿನ 25 ವರ್ಷಗಳ ಕಾಲ ಅವರನ್ನು ಎದುರಿಸಬಲ್ಲ ನಾಯಕ ಯಾರೂ ಇರಲಾರರು ಎಂದು ಶಿವಸೇನೆ ಹೇಳಿದೆ. ಕಳೆದ ಐದು ವರ್ಷಗಳಲ್ಲಿ ಹಲವು ಬಾರಿ ಬಿಜೆಪಿಯನ್ನು ಟೀಕಿಸಿದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಕೊನೆಗೂ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿತ್ತು.
Vijaya Karnataka Web Uddhav Thakre-PM Modi


ಐತಿಹಾಸಿಕ, ಅಭೂತಪೂರ್ವ: ಅಸ್ಸಾಂ ಮುಖ್ಯಮಂತ್ರಿ ಸೊನೊವಾಲ್
ಲೋಕಸಭಾ ಚುನಾವಣೆ ಫಲಿತಾಂಶವನ್ನು ಅಭೂತಪೂರ್ವ, ಐತಿಹಾಸಿಕ ಎಂದು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಬಣ್ಣಿಸಿದ್ದಾರೆ. ಈ ಗೆಲುವಿನ ಸಂಪೂರ್ಣ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಲ್ಲುತ್ತದೆ ಎಂದು ಅವರು ಪ್ರತಿಕ್ರಿಯಿಸಿದರು.

ಹಿರಿಯ ನಾಯಕ ಆಡ್ವಾಣಿ ಅಭಿನಂದನೆ:
ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್‌.ಕೆ ಆಡ್ವಾಣಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಈ ಅಭೂತಪೂರ್ವ ಗೆಲುವಿನತ್ತ ಬಿಜೆಪಿಯನ್ನು ಮುನ್ನಡೆಸಿದ ನರೇಂದ್ರಭಾಯಿ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಬಿಜೆಪಿ ಅಧ್ಯಕ್ಷರಾಗಿ ಅಮಿತ್ ಭಾಯಿ ಶಾ ಮತ್ತು ಎಲ್ಲ ಸಮರ್ಪಣಾ ಭಾವದ ಕಾರ್ಯಕರ್ತರ ಕಠಿಣ ಪರಿಶ್ರಮದಿಂದ ಬಿಜೆಪಿ ಇಂದು ಎಲ್ಲ ಮತದಾರರನ್ನು ತಲುಪುವಂತಾಗಿದೆ ಎಂದು ಆಡ್ವಾಣಿ ಹೇಳಿದರು.

ರಜನಿಕಾಂತ್‌ ಅಭಿನಂದನೆ:
ಲೋಕಸಭಾ ಚುನಾವಣೆಯ ಅಭೂತಪೂರ್ವ ಗೆಲುವಿಗಾಗಿ ತಮಿಳು ಸೂಪರ್‌ಸ್ಟಾರ್ ರಜನೀಕಾಂತ್ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದರು. 'ಆತ್ಮೀಯರಾದ ನರೇಂದ್ರ ಮೋದೀಜಿ, ನೀವು ಸಾಧಿಸಿಬಿಟ್ಟಿರಿ!!!. ದೇವರ ಕೃಪೆ ನಿಮ್ಮ ಮೇಲಿರಲಿ' ಎಂದು ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ