ಆ್ಯಪ್ನಗರ

ಮೇ 23ರಂದು ದಿಲ್ಲಿಯಲ್ಲಿ ಪ್ರತಿಪಕ್ಷಗಳ ನಾಯಕರ ಸಭೆ

ಭಾರಿ ಕುತೂಹಲ ಹುಟ್ಟಿಸಿರುವ ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುವ ದಿನವಾದ ಮೇ 23ರಂದೇ ದಿಲ್ಲಿಯಲ್ಲಿ ಪ್ರತಿಪಕ್ಷಗಳ ನಾಯಕರು ಮಹತ್ವದ ಸಭೆ ನಡೆಸುವ ಸಾಧ್ಯತೆಗಳಿವೆ

Vijaya Karnataka 15 May 2019, 5:30 am
ಹೊಸದಿಲ್ಲಿ: ಭಾರಿ ಕುತೂಹಲ ಹುಟ್ಟಿಸಿರುವ ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುವ ದಿನವಾದ ಮೇ 23ರಂದೇ ದಿಲ್ಲಿಯಲ್ಲಿ ಪ್ರತಿಪಕ್ಷಗಳ ನಾಯಕರು ಮಹತ್ವದ ಸಭೆ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.
Vijaya Karnataka Web ಸಂಸತ್‌ ಭವನ
ಸಂಸತ್‌ ಭವನ


ಮೇ 21ರಂದು ಇಂತಹದ್ದೊಂದು ಸಭೆ ನಡೆಸುವ ಕುರಿತು ಚರ್ಚಿಸಲು ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಕಳೆದ ವಾರ ಕೋಲ್ಕೊತಾದಲ್ಲಿ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದರು.

''ಫಲಿತಾಂಶ ಘೋಷಣೆಯಾಗುವ ಮೊದಲೇ ಸಭೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ. ಮೊದಲು ರಿಸಲ್ಟ್‌ ಬರಲಿ, ಯಾವ ಪಕ್ಷಗಳು ಎಷ್ಟು ಸೀಟು ಪಡೆದಿವೆ ಎಂಬ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿ, ನಂತರ ನೋಡೋಣ,'' ಎಂದು 'ದೀದಿ' ಹೇಳಿದ್ದರಿಂದ ನಾಯ್ಡು ಬರಿಗೈಲಿ ಮರಳಿದ್ದರು. ಎಸ್ಪಿ ಮುಖ್ಯಸ್ಥ ಅಖಿಲೇಶ್‌ ಯಾದವ್‌, ಬಿಎಸ್ಪಿ ವರಿಷ್ಠೆ ಮಾಯಾವತಿ ಅವರಿಂದಲೂ ಇದೇ ರೀತಿಯ ಸಂದೇಶ ರವಾನೆಯಾಗಿತ್ತು.

ಈ ಎಲ್ಲ ಕಾರಣಗಳಿಂದ ಮೇ 23ರಂದೇ ಸಭೆ ನಡೆಸಲು ಪ್ರತಿಪಕ್ಷಗಳು ನಿರ್ಧರಿಸಿವೆ. ಕಾಂಗ್ರೆಸ್‌ ನೇತೃತ್ವದಲ್ಲಿ ಸಭೆ ನಡೆಯುವ ಸಾಧ್ಯತೆಗಳಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ