ಆ್ಯಪ್ನಗರ

ಸರ್ಜಿಕಲ್‌ ಸ್ಟ್ರೈಕ್‌ ಬಗ್ಗೆ ಪ್ರತಿಪಕ್ಷಗಳ ಪ್ರಶ್ನೆ: ನರೇಂದ್ರ ಮೋದಿ ಟೀಕೆ

ದೇಶಾದ್ಯಂತ ಇರುವ ಚೌಕಿದಾರ್‌ಗಳೊಂದಿಗೆ ಸಂವಾದ ನಡೆಸಿದ ಮೋದಿ, ಬಾಲಾಕೋಟ್‌ನಲ್ಲಿ ವಾಯುದಾಳಿ ನಡೆಸಿದ್ದಕ್ಕೆ ಭಾರತದಲ್ಲಿನ ಕೆಲವರಿಗೆ ನೋವಾಗಿರುವುದು ಆಶ್ಚರ್ಯ ತಂದಿದೆ ಎಂದು ಹೇಳಿದರು.

Vijaya Karnataka Web 20 Mar 2019, 9:33 pm
ಹೊಸದಿಲ್ಲಿ: ಪಾಕಿಸ್ತಾನದಲ್ಲಿನ ಬಾಲಾಕೋಟ್ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ವಾಯುಸೇನೆ ದಾಳಿ ನಡೆಸಿರುವುದನ್ನು ಪ್ರಶ್ನಿಸುತ್ತಿರುವ ಪ್ರತಿಪಕ್ಷಗಳ ಧೋರಣೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೀಕಿಸಿದ್ದಾರೆ.
Vijaya Karnataka Web ಮೋದಿ
ಮೋದಿ


ದೇಶಾದ್ಯಂತ ಇರುವ ಚೌಕಿದಾರ್‌ಗಳೊಂದಿಗೆ ಸಂವಾದ ನಡೆಸಿದ ಮೋದಿ, ಬಾಲಾಕೋಟ್‌ನಲ್ಲಿ ವಾಯುದಾಳಿ ನಡೆಸಿದ್ದಕ್ಕೆ ಭಾರತದಲ್ಲಿನ ಕೆಲವರಿಗೆ ನೋವಾಗಿರುವುದು ಆಶ್ಚರ್ಯ ತಂದಿದೆ ಎಂದು ಹೇಳಿದರು.

ಸೇನಾಪಡೆಗಳ ಯೋಧರು ತಮ್ಮ ಪ್ರಾಣವನ್ನು ಒತ್ತೆ ಇಟ್ಟು ಶೌರ್ಯ್, ಸಾಹಸ ಮೆರೆದಿರುವ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡಬೇಕಾಗಿದೆ ಎಂದು ಮೋದಿ ಹೇಳಿದರು.

ಕೆಲವರು ತಮ್ಮ ಸ್ವಾರ್ಥ ಸಾಧನೆಗಾಗಿ ಚೌಕಿದಾರರ ವಿರುದ್ಧ ಕಳೆದ ಕೆಲವು ತಿಂಗಳಿನಿಂದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬಡವರು ಹಾಗೂ ರೈತರ ಕಲ್ಯಾಣಕ್ಕಾಗಿ ಎನ್‌ಡಿಎ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ