ಆ್ಯಪ್ನಗರ

ಪ್ರಣಬ್‌ ದಾ ಭೇಟಿ ಮಾಡಿ ಆಶೀರ್ವಾದ ಪಡೆದ ನರೇಂದ್ರ ಮೋದಿ

ಪ್ರಣಬ್‌ ಮುಖರ್ಜಿ ಮತ್ತು ನರೇಂದ್ರ ಮೋದಿ ಅವಿನಾಭಾವ ಸಂಬಂಧ ಹೊಂದಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರಕಾರದ ಶಿಫಾರಸಿನ ಮೇರೆಗೆ ಕಳೆದ ಜನವರಿಯಲ್ಲಿ ಪ್ರಣಬ್ ಮುಖರ್ಜಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Vijaya Karnataka Web 28 May 2019, 3:25 pm
ಹೊಸದಿಲ್ಲಿ: ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮುನ್ನ ಹಿರಿಯ ನಾಯಕರನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರನ್ನು ಮಂಗಳವಾರ ಭೇಟಿ ಮಾಡಿದ ನರೇಂದ್ರ ಮೋದಿ ಆಶೀರ್ವಾದ ಪಡೆದರು.

ಮಾಜಿ ರಾಷ್ಟ್ರಪತಿಯನ್ನು ರಾಜನೀತಿಜ್ಞ ಎಂದು ಮೋದಿ ಬಣ್ಣಿಸಿದ್ದಾರೆ.

ಪ್ರಣಬ್‌ ದಾ ಅವರೊಂದಿಗಿನ ಪ್ರತಿ ಭೇಟಿಯೂ ಭಾರಿ ಅನುಭವ, ಜ್ಞಾನ ಒದಗಿಸುತ್ತದೆ. ಅವರ ಒಳನೋಟಗಳಿಗೆ ಸಾಟಿಯೇ ಇಲ್ಲ.ದೇಶಕ್ಕೆ ಅವರು ಅಪಾರ ಕೊಡಗೆಯನ್ನು ನೀಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.


ಪ್ರಣಬ್‌ ದಾ ಭೇಟಿಯ ಕುರಿತು ನರೇಂದ್ರ ಮೋದಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪ್ರಣಬ್‌ ಮುಖರ್ಜಿ ಮತ್ತು ನರೇಂದ್ರ ಮೋದಿ ಅವಿನಾಭಾವ ಸಂಬಂಧ ಹೊಂದಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರಕಾರದ ಶಿಫಾರಸಿನ ಮೇರೆಗೆ ಕಳೆದ ಜನವರಿಯಲ್ಲಿ ಪ್ರಣಬ್ ಮುಖರ್ಜಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ