ಆ್ಯಪ್ನಗರ

ಅಬ್ದುಲ್ಲಾ, ಮುಫ್ತಿಗಳಿಂದ ಭಾರತವನ್ನು ಒಡೆಯಲು ಬಿಡುವುದಿಲ್ಲ: ಪಿಎಂ ಮೋದಿ

ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕು ಎಂಬ ಎನ್‌ಸಿ ಮುಖಂಡ ಓಮರ್‌ ಅಬ್ದುಲ್ಲಾ ಅವರ ಹೇಳಿಕೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ.

TOI.in 14 Apr 2019, 2:33 pm
ಕಥುವಾ: ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕುಟುಂಬಗಳ ಮೂರು ತಲೆಮಾರಿನವರು ಹಾಳು ಮಾಡಿದ್ದಾರೆ. ಅಬ್ದುಲ್ಲಾ ಮತ್ತು ಮುಫ್ತಿಗಳಿಂದ ಭಾರತವನ್ನು ಒಡೆಯಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕು ಎಂಬ ಎನ್‌ಸಿ ಮುಖಂಡ ಓಮರ್‌ ಅಬ್ದುಲ್ಲಾ ಅವರ ಹೇಳಿಕೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ಕಣಿವೆ ರಾಜ್ಯದಲ್ಲಿ ಮೂಲ ನಿವಾಸಿಗಳಾದ ಪಂಡಿತರು ವಲಸೆ ಹೋಗಿರುವುದಕ್ಕೆ ಕಾಂಗ್ರೆಸ್‌ ಕಾರಣ ಎಂದು ಪಿಎಂ ಮೋದಿ ಆರೋಪಿಸಿದ್ದಾರೆ. ವಲಸೆ ಹೋದ ಸಮುದಾಯವನ್ನು ಮತ್ತೆ ಸ್ವಂತ ನಾಡಿಗೆ ಮರಳುವಂತೆ ಮಾಡುವತ್ತ ದಿಟ್ಟ ಹೆಜ್ಜೆ ಇಡುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.

ಬಾಲಾಕೋಟ್‌ ವಾಯು ದಾಳಿ ಬಗ್ಗೆ ಕೆಲವು ಪ್ರತಿಪಕ್ಷಗಳು ಪ್ರಶ್ನಿಸುತ್ತಿವೆ. ಭಾರತ ಸೇನೆಯ ಶೌರ್ಯದ ಮೇಲೆ ಕಾಂಗ್ರೆಸ್‌ ಎಂದೂ ನಂಬಿಕೆ ಇಟ್ಟುಕೊಂಡಿಲ್ಲ ಎಂದು ಪಿಎಂ ಮೋದಿ ಆರೋಪಿಸಿದ್ದಾರೆ. ಅಲೆಯು ಈ ಬಾರಿ 2014ಕ್ಕಿಂತಲೂ ಪ್ರಬಲವಾಗಿ ನಮ್ಮ ಪರವಾಗಿ ಇದೆ. ಸಮೀಕ್ಷೆಯೊಂದರ ಪ್ರಕಾರ ಕಾಂಗ್ರೆಸ್‌ ಗೆಲ್ಲುವ ಸೀಟುಗಳಿಗಿಂತ 3 ಪಟ್ಟು ಅಧಿಕ ಬಿಜೆಪಿ ಗೆಲ್ಲಲಿದೆ ಎಂದು ಮೋದಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಬಾರಾಮುಲ್ಲಾ ಮತ್ತು ಜಮ್ಮುವಿನಲ್ಲಿ ಅಧಿಕ ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ಭಯೋತ್ಪಾದಕ ನಾಯಕರ ಮತ್ತು ಅವಕಾಶವಾದಿಗಳಿಗೆ ಪ್ರತ್ಯುತ್ತರ ನೀಡಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌