ಆ್ಯಪ್ನಗರ

ಸಬ್‌ ಕಾ ಸಾಥ್‌ + ಸಬ್‌ ಕಾ ವಿಕಾಸ್‌+ ಸಬ್‌ ಕಾ ವಿಶ್ವಾಸ್ = ವಿಜಯೀ ಭಾರತ್: ಪ್ರಧಾನಿ ಮೋದಿ ಟ್ವೀಟ್

ಬಿಜೆಪಿಗೆ ನಿರ್ಣಾಯಕ ಜನಾದೇಶ ನೀಡಿದ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಎಲ್ಲರ ಜತೆಗೆ ಎಲ್ಲರ ಅಭಿವೃದ್ಧಿ, ಎಲ್ಲರ ವಿಶ್ವಾಸದೊಂದಿಗೆ ಮುನ್ನಡೆಯೋಣ, ವಿಜಯೀ ಭಾರತ ನಿರ್ಮಿಸೋಣ ಎಂದು ಕರೆ ನೀಡಿದ್ದಾರೆ.

Vijaya Karnataka Web 23 May 2019, 3:21 pm
ಹೊಸದಿಲ್ಲಿ: ಲೋಕಸಭಾ ಚುನಾವಣೆ 2019ರಲ್ಲಿ ದೇಶದ ಜನತೆ ಬಿಜೆಪಿಗೆ ನೀಡಿದ ಭರ್ಜರಿ ಜನಾದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.
Vijaya Karnataka Web PM Modi new


ಮತಗಳ ಎಣಿಕೆ ಪ್ರಗತಿಯಲ್ಲಿದ್ದು, ಸ್ವತಃ ಬಿಜೆಪಿಯೇ 300ರ ಗಡಿ ದಾಟುವ ನಿರೀಕ್ಷೆಯಿದೆ. ಎನ್‌ಡಿಎ ಅಂಗಪಕ್ಷಗಳೂ ಸೇರಿ 350ರ ಗಡಿ ದಾಟುವ ಟ್ರೆಂಡ್‌ಗಳು ಕಾಣಿಸುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿ ಜನತೆಗೆ ವಂದನೆ ಸಲ್ಲಿಸಿದ್ದಾರೆ.

ಸಬ್‌ ಕಾ ಸಾಥ್‌ + ಸಬ್‌ ಕಾ ವಿಕಾಸ್ + ಸಬ್‌ ಕಾ ವಿಶ್ವಾಸ್‌ = ವಿಜಯೀ ಭಾರತ್‌ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.


ನಾವೆಲ್ಲರೂ ಒಟ್ಟಾಗಿ ಬೆಳೆಯೋಣ, ಜತೆಯಾಗಿ ಸಮೃದ್ಧಿ ಪಡೆಯೋಣ, ಜತೆಯಾಗಿ ಬಲಿಷ್ಠ ಮತ್ತು ಎಲ್ಲರನ್ನೂ ಒಳಗೊಂಡ ಭಾರತ ನಿರ್ಮಿಸೋಣ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ