ಅಯೋಧ್ಯೆ: ಕಾಂಗ್ರೆಸ್ ನಾಯಕರು ನೀಡುವ ಹೇಳಿಕೆಗೆ ಪಾಕಿಸ್ತಾನದಲ್ಲಿ ಶ್ಲಾಘನೆ ವ್ಯಕ್ತವಾಗುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಶುಕ್ರವಾರ ತಿರುಗೇಟು ನೀಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, 2015ರಲ್ಲಿ ಮೋದಿ ಕೈಗೊಂಡ ದಿಢೀರ್ ಪಾಕ್ ಭೇಟಿಯ ಬಗ್ಗೆ ಕಾಲೆಳೆದಿದ್ದಾರೆ.
''ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿದ್ದು ಮೋದಿ ಅವರೇ ಅಲ್ಲವೇ? ಆಗಿನ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರೇ ಮೋದಿಗೆ ಬಿರಿಯಾನಿ ಬಡಿಸಿದ್ದರು,''ಎಂದು ಟಾಂಗ್ ನೀಡಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಪ್ರಿಯಾಂಕಾ ತವರು ಕ್ಷೇತ್ರ ವಾರಾಣಸಿಯ ಬಗ್ಗೆ ಮೋದಿ ನಿರ್ಲಕ್ಷ್ಯವನ್ನೂ ಟೀಕಿಸಿದ್ದಾರೆ. ''ಜಗತ್ತಿನ ನಾನಾ ದೇಶಗಳನ್ನು ಸುತ್ತುವ ಪ್ರಧಾನಿ ಅವರಿಗೆ ಕಳೆದ 5 ವರ್ಷಗಳಿಂದ ತಮ್ಮ ಕ್ಷೇತ್ರದ ಒಂದೇ ಒಂದು ಗ್ರಾಮಕ್ಕೆ ಭೇಟಿ ನೀಡುವಷ್ಟು ಸಮಯವೂ ಇಲ್ಲ,'' ಎಂದಿದ್ದಾರೆ.
''ಕಳೆದ ಐದು ವರ್ಷಗಳ ಆಡಳಿತಾವಧಿಯಲ್ಲಿ ಸಾಕಷ್ಟು ಬಾರಿ ವಿದೇಶ ಪ್ರವಾಸ ಕೈಗೊಡಿರುವ ಮೋದಿ ಅವರು ತಮ್ಮ ಕ್ಷೇತ್ರ ವಾರಾಣಸಿಯ ಒಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ವಾಸ್ತವ ಸಂಗತಿ ಅರಿಯುವ ಪ್ರಯತ್ನ ಮಾಡಲಿಲ್ಲ. ಒಂದಷ್ಟು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು ಬಿಟ್ಟರೆ ವಾರಾಣಸಿಯನ್ನು ಅವರು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಅವರ ಸರಕಾರ ಜನ ವಿರೋಧಿ ಮತ್ತು ರೈತ ವಿರೋಧಿಯಾಗಿದೆ,'' ಎಂದು ವಾಗ್ದಾಳಿ ನಡೆಸಿದರು.
ಬಡವರ ಬ್ಯಾಂಕ್ ಖಾತೆಗೆ ವಾರ್ಷಿಕ 72,000 ರೂ. ಜಮೆ ಮಾಡುವ ಕನಿಷ್ಠ ಆದಾಯ ಖಾತ್ರಿ ಯೋಜನೆಯನ್ನು ಸಮರ್ಥಿಸಿಕೊಂಡಿರುವ ಅವರು, ಎಂನರೇಗಾ ಸೇರಿದಂತೆ ಯುಪಿಎ ಸರಕಾರ ಜಾರಿಗೆ ತಂದ ಯೋಜನೆಗಳನ್ನು ಹಳ್ಳ ಹಿಡಿಯುವಂತೆ ಮೋದಿ ಸರಕಾರ ಮಾಡಿದೆ ಎಂದು ಟೀಕಿಸಿದರು.
ವಾರಾಣಸಿಯಿಂದ ಸ್ಪರ್ಧೆ: ಉತ್ತರ ಪ್ರದೇಶದಲ್ಲಿ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
ಕಳೆದ ಎರಡು ದಿನಗಳಿಂದ ಸಹೋದರ ರಾಹುಲ್ ಅವರ ಅಮೇಠಿ ಹಾಗೂ ತಾಯಿ ಸೋನಿಯಾ ಅವರ ರಾಯ್ಬರೇಲಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಅವರು ವಾರಾಣಸಿಯಿಂದ ತಾವೇಕೆ ಸ್ಪರ್ಧಿಸಬಾರದು ಎಂದು ಪ್ರಶ್ನಿಸಿದ್ದಾರೆ. ರಾಯ್ಬರೇಲಿಯಲ್ಲಿ 'ಮೇಡಂ ನೀವು ಈ ಕ್ಷೇತ್ರದಿಂದ ಸ್ಪರ್ಧಿಸಬೇಕಿತ್ತು. ಯಾಕೆ ಮನಸ್ಸು ಮಾಡಲಿಲ್ಲ' ಎಂಬ ಕಾರ್ಯಕರ್ತರ ಪ್ರಶ್ನೆಗೆ ''ರಾಯ್ಬರೇಲಿಯಿಂದೇ ಸ್ಪರ್ಧಿಸಬೇಕೆಂದು ಏಕೆ ಬಯಸುತ್ತೀರಿ. ಪಕ್ಷ ಬಯಸಿದರೆ ಯಾವ ಕ್ಷೇತ್ರದಿಂದಲಾದರೂ ಸ್ಪರ್ಧಿಸಲು ನಾನು ರೆಡಿ. ಬೇಕಾದರೆ ವಾರಾಣಸಿಯೂ ಆಗಬಹುದು, '' ಎಂದು ಪ್ರತಿಕ್ರಿಯಿಸಿದ್ದಾರೆ. ಇದರೊಂದಿಗೆ ಅವರು ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ''ಈ ಸಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ನಡೆಸಬೇಕೇ ಬೇಡವೇ ಎಂಬುದನ್ನು ಸ್ವತಃ ಪ್ರಿಯಾಂಕಾ ಅವರೇ ನಿರ್ಧರಿಸಬೇಕು,'' ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.
''ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿದ್ದು ಮೋದಿ ಅವರೇ ಅಲ್ಲವೇ? ಆಗಿನ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರೇ ಮೋದಿಗೆ ಬಿರಿಯಾನಿ ಬಡಿಸಿದ್ದರು,''ಎಂದು ಟಾಂಗ್ ನೀಡಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಪ್ರಿಯಾಂಕಾ ತವರು ಕ್ಷೇತ್ರ ವಾರಾಣಸಿಯ ಬಗ್ಗೆ ಮೋದಿ ನಿರ್ಲಕ್ಷ್ಯವನ್ನೂ ಟೀಕಿಸಿದ್ದಾರೆ. ''ಜಗತ್ತಿನ ನಾನಾ ದೇಶಗಳನ್ನು ಸುತ್ತುವ ಪ್ರಧಾನಿ ಅವರಿಗೆ ಕಳೆದ 5 ವರ್ಷಗಳಿಂದ ತಮ್ಮ ಕ್ಷೇತ್ರದ ಒಂದೇ ಒಂದು ಗ್ರಾಮಕ್ಕೆ ಭೇಟಿ ನೀಡುವಷ್ಟು ಸಮಯವೂ ಇಲ್ಲ,'' ಎಂದಿದ್ದಾರೆ.
''ಕಳೆದ ಐದು ವರ್ಷಗಳ ಆಡಳಿತಾವಧಿಯಲ್ಲಿ ಸಾಕಷ್ಟು ಬಾರಿ ವಿದೇಶ ಪ್ರವಾಸ ಕೈಗೊಡಿರುವ ಮೋದಿ ಅವರು ತಮ್ಮ ಕ್ಷೇತ್ರ ವಾರಾಣಸಿಯ ಒಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ವಾಸ್ತವ ಸಂಗತಿ ಅರಿಯುವ ಪ್ರಯತ್ನ ಮಾಡಲಿಲ್ಲ. ಒಂದಷ್ಟು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು ಬಿಟ್ಟರೆ ವಾರಾಣಸಿಯನ್ನು ಅವರು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಅವರ ಸರಕಾರ ಜನ ವಿರೋಧಿ ಮತ್ತು ರೈತ ವಿರೋಧಿಯಾಗಿದೆ,'' ಎಂದು ವಾಗ್ದಾಳಿ ನಡೆಸಿದರು.
ಬಡವರ ಬ್ಯಾಂಕ್ ಖಾತೆಗೆ ವಾರ್ಷಿಕ 72,000 ರೂ. ಜಮೆ ಮಾಡುವ ಕನಿಷ್ಠ ಆದಾಯ ಖಾತ್ರಿ ಯೋಜನೆಯನ್ನು ಸಮರ್ಥಿಸಿಕೊಂಡಿರುವ ಅವರು, ಎಂನರೇಗಾ ಸೇರಿದಂತೆ ಯುಪಿಎ ಸರಕಾರ ಜಾರಿಗೆ ತಂದ ಯೋಜನೆಗಳನ್ನು ಹಳ್ಳ ಹಿಡಿಯುವಂತೆ ಮೋದಿ ಸರಕಾರ ಮಾಡಿದೆ ಎಂದು ಟೀಕಿಸಿದರು.
ವಾರಾಣಸಿಯಿಂದ ಸ್ಪರ್ಧೆ: ಉತ್ತರ ಪ್ರದೇಶದಲ್ಲಿ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
ಕಳೆದ ಎರಡು ದಿನಗಳಿಂದ ಸಹೋದರ ರಾಹುಲ್ ಅವರ ಅಮೇಠಿ ಹಾಗೂ ತಾಯಿ ಸೋನಿಯಾ ಅವರ ರಾಯ್ಬರೇಲಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಅವರು ವಾರಾಣಸಿಯಿಂದ ತಾವೇಕೆ ಸ್ಪರ್ಧಿಸಬಾರದು ಎಂದು ಪ್ರಶ್ನಿಸಿದ್ದಾರೆ. ರಾಯ್ಬರೇಲಿಯಲ್ಲಿ 'ಮೇಡಂ ನೀವು ಈ ಕ್ಷೇತ್ರದಿಂದ ಸ್ಪರ್ಧಿಸಬೇಕಿತ್ತು. ಯಾಕೆ ಮನಸ್ಸು ಮಾಡಲಿಲ್ಲ' ಎಂಬ ಕಾರ್ಯಕರ್ತರ ಪ್ರಶ್ನೆಗೆ ''ರಾಯ್ಬರೇಲಿಯಿಂದೇ ಸ್ಪರ್ಧಿಸಬೇಕೆಂದು ಏಕೆ ಬಯಸುತ್ತೀರಿ. ಪಕ್ಷ ಬಯಸಿದರೆ ಯಾವ ಕ್ಷೇತ್ರದಿಂದಲಾದರೂ ಸ್ಪರ್ಧಿಸಲು ನಾನು ರೆಡಿ. ಬೇಕಾದರೆ ವಾರಾಣಸಿಯೂ ಆಗಬಹುದು, '' ಎಂದು ಪ್ರತಿಕ್ರಿಯಿಸಿದ್ದಾರೆ. ಇದರೊಂದಿಗೆ ಅವರು ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ''ಈ ಸಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ನಡೆಸಬೇಕೇ ಬೇಡವೇ ಎಂಬುದನ್ನು ಸ್ವತಃ ಪ್ರಿಯಾಂಕಾ ಅವರೇ ನಿರ್ಧರಿಸಬೇಕು,'' ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.