ಆ್ಯಪ್ನಗರ

ರಾಹುಲ್‌ ಸಂವಾದದಿಂದ ನೀತಿ ಸಂಹಿತೆ ಉಲ್ಲಂಘನೆ ಆಗಿಲ್ಲವೆಂದ ಆಯೋಗ

ಆಯೋಗದ ಪೂರ್ವಾನುಮತಿ ಪಡೆದೇ ನಡೆಸಿರುವ ಆ ಕಾರ್ಯಕ್ರಮದಿಂದ ನೀತಿ ಸಂಹಿತೆ ಉಲ್ಲಂಘನೆ ಆಗಿಲ್ಲ ಎಂದು ತಮಿಳುನಾಡು ಮುಖ್ಯ ಚುನಾವಣಾ ಅಧಿಕಾರಿ ಸತ್ಯಬ್ರತಾ ಸಾಹೂ ಸ್ಪಷ್ಟಪಡಿಸಿದ್ದಾರೆ.

Vijaya Karnataka 22 Mar 2019, 5:00 am
ಚೆನ್ನೈ: ಚುನಾವಣಾ ದಿನಾಂಕ ಘೋಷಣೆಯಾದ ದಿನವೇ ಚೆನ್ನೈಕಾಲೇಜೊಂದರ ವಿದ್ಯಾರ್ಥಿಗಳ ಜತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನಡೆಸಿದ್ದ ಸಂವಾದದಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಮಾರ್ಚ್‌ 13ರಂದು ಚೆನ್ನೈನ ಸ್ಟೆಲ್ಲಾ ಮೇರಿಸ್‌ ಕಾಲೇಜಿನ ವಿದ್ಯಾರ್ಥಿನಿಯರ ಜತೆ ರಾಹುಲ್‌ ಗಾಂಧಿ ನಡೆಸಿದ್ದ ಸಂವಾದದ ವಿರುದ್ಧ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ತಮಿಳುನಾಡು ಮುಖ್ಯ ಚುನಾವಣಾ ಅಧಿಕಾರಿ ಸತ್ಯಬ್ರತಾ ಸಾಹೂ, ಆಯೋಗದ ಪೂರ್ವಾನುಮತಿ ಪಡೆದೇ ನಡೆಸಿರುವ ಆ ಕಾರ್ಯಕ್ರಮದಿಂದ ನೀತಿ ಸಂಹಿತೆ ಉಲ್ಲಂಘನೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಹುಲ್‌ ಅಂದು ಆಡಿದ ಮಾತುಗಳ ಬಗ್ಗೆಯೂ ವರದಿ ಪಡೆಯಲಾಗುತ್ತಿದೆ. ಅದರಲ್ಲೇನಾದರೂ ನೀತಿಸಂಹಿತೆಗೆ ಧಕ್ಕೆ ತರುವ ಅಂಶಗಳಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಂವಾದದ ವೇಳೆ ರಾಹುಲ್‌ ಅವರು ಮಹಿಳೆಯರಿಗೆ ಶೇ.33 ಮೀಸಲು ಭರವಸೆ ನೀಡಿದ್ದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ದೂರು ದಾಖಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌