ಆ್ಯಪ್ನಗರ

ರಾಹುಲ್‌ ಗಾಂಧಿ ವಿಶ್ವಾಸಾರ್ಹತೆಕ್ಕೆ ಧಕ್ಕೆ: ನಿರ್ಮಲಾ ಸೀತಾರಾಮನ್‌

ರಫೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ಸುಳ್ಳು ಹೇಳಿದ್ದೇವೆ ಎನ್ನವುದನ್ನು ಕಾಂಗ್ರೆಸ್ ಪಕ್ಷ ಒಪ್ಪಿಕೊಂಡಿದೆ. ಹೀಗಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು

Vijaya Karnataka Web 22 Apr 2019, 9:34 pm
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿಶ್ವಾಸಾರ್ಹತೆಗೆ ಹೊಡೆತ ಬಿದ್ದಿದೆ ಎಂದು ಬಿಜೆಪಿ ಹಿರಿಯ ನಾಯಕಿ ಹಾಗು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Vijaya Karnataka Web ನಿರ್ಮಲಾ ಸೀತಾರಾಮನ್‌
ನಿರ್ಮಲಾ ಸೀತಾರಾಮನ್‌


ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಫೇಲ್ ತೀರ್ಪಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ, ತಾವು ನೀಡಿದ್ದ ಹೇಳಿಕೆ ಕುರಿತು ಸುಪ್ರೀಂಕೋರ್ಟ್‌ಗೆ ವಿಷಾದ ವ್ಯಕ್ತಪಡಿಸಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಜನರಿಗೆ ಸುಳ್ಳು ಹೇಳಲು ಸಾಧ್ಯವಿಲ್ಲ ಎನ್ನುವುದು ಇದರಿಂದ ಗೊತ್ತಾಲಿದೆ ಎಂದರು.

ಕಾಂಗ್ರೆಸ್ ಪಕ್ಷ ಸುಳ್ಳು ಹೇಳುವುದರ ಮೇಲೆ ಹೆಚ್ಚು ಅವಲಂಬಿತವಾಗಿದೆ ಎಂದು ಸಚಿವರು ಹೇಳಿದರು.

ಪಕ್ಷದ ಮತ್ತೊಬ್ಬ ವಕ್ತಾರ ಜಿವಿಎಲ್ ನರಸಿಂಹರಾವ್ ಮಾತನಾಡಿದ, ರಫೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ಸುಳ್ಳು ಹೇಳಿದ್ದೇವೆ ಎನ್ನವುದನ್ನು ಕಾಂಗ್ರೆಸ್ ಪಕ್ಷ ಒಪ್ಪಿಕೊಂಡಿದೆ. ಹೀಗಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌