ಹೊಸದಿಲ್ಲಿ: ಆಮ್ ಆದ್ಮಿ ಪಾರ್ಟಿ ಜತೆ ದಿಲ್ಲಿಯಲ್ಲಿ ಚುನಾವಣಾ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಶುಕ್ರವಾರ ಅಧಿಕೃತವಾಗಿ ಘೋಷಿಸಿದೆ. ಇದರೊಂದಿಗೆ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ಇದ್ದ ಮೈತ್ರಿ ಗೊಂದಲಕ್ಕೆ ತೆರೆವ ಬಿದ್ದಂತಾಗಿದೆ. ''ಚುನಾವಣೆ ಹೊಂದಾಣಿಕೆ ಬಗ್ಗೆ ಕಾಂಗ್ರೆಸ್ನ ಸ್ಥಳೀಯ ನಾಯಕರ ವಿರೋಧವಿದ್ದ ಕಾರಣ ಹೈಕಮಾಂಡ್ ಮಟ್ಟದಲ್ಲಿಯೇ ಮಾತುಕತೆ ನಡೆದಿತ್ತು. ರಾಹುಲ್ ಗಾಂಧಿ ಅವರಿಗೆ ಮೈತ್ರಿ ಮಾಡಿಕೊಳ್ಳಲು ಮನಸ್ಸಿತ್ತು. ಆದರೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೇ ಮಾತುಕತೆಯನ್ನು ಮುರಿದು ಹಾಕಿದರು,'' ಎಂದು ಕಾಂಗ್ರೆಸ್ ಮುಖಂಡ ಪಿ.ಸಿ.ಚಾಕೋ ತಿಳಿಸಿದರು. ದಿಲ್ಲಿಯ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ಆಪ್ ನಾಲ್ಕು ಸ್ಥಾನಗಳಿಗೆ ಪಟ್ಟು ಹಿಡಿದಿದ್ದೇ ಮೈತ್ರಿ ಮಾತುಕತೆ ಮುರಿದು ಬೀಳಲು ಕಾರಣ ಎನ್ನಲಾಗಿದೆ. ಈ ನಡುವೆ, ಹರಿಯಾಣದಲ್ಲಿ ಮಾಜಿ ಮುಖ್ಯಮಂತ್ರಿ ಓಂಪ್ರಕಾಶ್ ಚೌತಾಲಾ ಅವರ ಜನನಾಯಕ ಜನತಾ ಪಾರ್ಟಿ (ಜೆಪಿಸಿ) ಜತೆ ಮೈತ್ರಿ ಮಾಡಿಕೊಳ್ಳುವುದಾಗಿ ಆಪ್ ಘೋಷಿಸಿದೆ. ಇಲ್ಲಿಯೂ ಕಾಂಗ್ರೆಸ್ ಜತೆ ಹೊಂದಾಣಿಕೆ ಕೇಜ್ರಿವಾಲ್ ಪ್ರಸ್ತಾಪ ಇಟ್ಟಿದ್ದರು.
ದಿಲ್ಲಿಯಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆ, ಹರಿಯಾಣದಲ್ಲಿ ಆಪ್ಗೆ ಜೆಪಿಪಿ ಮಿತ್ರ
ದಿಲ್ಲಿಯ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ಆಪ್ ನಾಲ್ಕು ಸ್ಥಾನಗಳಿಗೆ ಪಟ್ಟು ಹಿಡಿದಿದ್ದೇ ಮೈತ್ರಿ ಮಾತುಕತೆ ಮುರಿದು ಬೀಳಲು ಕಾರಣ ಎನ್ನಲಾಗಿದೆ.
Vijaya Karnataka 13 Apr 2019, 5:00 am