ಆ್ಯಪ್ನಗರ

ದಾವಣಗೆರೆಗೆ ಎಸ್ ಎಸ್ ಮಲ್ಲಿಕಾರ್ಜುನ ಅಭ್ಯರ್ಥಿ

ದಾವಣಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಹೆಸರನ್ನು ಕಾಂಗ್ರೆಸ್‌ ಅಂತಿಮಗೊಳಿಸಿದೆ. ಇದರೊಂದಿಗೆ ಕ್ಷೇತ್ರದಲ್ಲಿ ತಂದೆ ಶಾಮನೂರು ಶಿವಶಂಕರಪ್ಪ ಬದಲು ಪುತ್ರ ಮಲ್ಲಿಕಾರ್ಜುನ್‌ ಕಣಕ್ಕಿಳಿದಂತಾಗಲಿದೆ.

Vijaya Karnataka 30 Mar 2019, 5:00 am
ಬೆಂಗಳೂರು: ದಾವಣಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಹೆಸರನ್ನು ಕಾಂಗ್ರೆಸ್‌ ಅಂತಿಮಗೊಳಿಸಿದೆ. ಇದರೊಂದಿಗೆ ಕ್ಷೇತ್ರದಲ್ಲಿ ತಂದೆ ಶಾಮನೂರು ಶಿವಶಂಕರಪ್ಪ ಬದಲು ಪುತ್ರ ಮಲ್ಲಿಕಾರ್ಜುನ್‌ ಕಣಕ್ಕಿಳಿದಂತಾಗಲಿದೆ.
Vijaya Karnataka Web S_S_Mallikarjun


ಈ ಮೊದಲು ಶಾಮನೂರು ಅವರನ್ನು ಅಭ್ಯರ್ಥಿಯೆಂದು ಘೋಷಿಸಲಾಗಿತ್ತು. ಅವರು ಸ್ಪರ್ಧೆ ಮಾಡುವುದಿಲ್ಲವೆಂದು ಹೇಳಿದ್ದರಿಂದ ಕಡೆಕ್ಷಣದಲ್ಲಿ ಈ ಬದಲಾವಣೆ ಮಾಡಲಾಗಿದೆ. ಮಲ್ಲಿಕಾರ್ಜುನ್‌ ಕೂಡ ಹಿಂದೇಟು ಹಾಕಿದ್ದರಿಂದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮಂಜಪ್ಪ ಹಾಗೂ ತೇಜಸ್ವಿ ಪಟೇಲ್‌ ಹೆಸರನ್ನು ಕೆಪಿಸಿಸಿಯಿಂದ ಶಿಫಾರಸು ಮಾಡಲಾಗಿತ್ತು. ಈ ಪೈಕಿ ಪಟೇಲ್‌ ಆಯ್ಕೆಗೆ ಹೈಕಮಾಂಡ್‌ ಒಲವು ತೋರಿದ್ದರಿಂದ ಮಲ್ಲಿಕಾರ್ಜುನ್‌ ಇದನ್ನು ವಿರೋಧಿಸಿದ್ದರು. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಭೇಟಿ ಮಾಡಿದ್ದ ಮಲ್ಲಿಕಾರ್ಜುನ್‌ ತೇಜಸ್ವಿ ಅವರಿಗೆ ಟಿಕೆಟ್‌ ನೀಡಬಾರದು ಎಂದಿದ್ದರು. ಬಳಿಕ ಗುಂಡೂರಾವ್‌ ಸೇರಿದಂತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಲ್ಲಿಕಾರ್ಜುನ್‌ ಅವರಿಗೇ ಸ್ಪರ್ಧಿಸುವಂತೆ ತಾಕೀತು ಮಾಡಿದರು. ಅದರಂತೆ ದಾವಣಗೆರೆಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ್‌ ಹೊರಹೊಮ್ಮಿದ್ದಾರೆ.

ಧಾರವಾಡಕ್ಕೆ ವಿನಯ್‌?

ಈ ಮಧ್ಯೆ ಧಾರವಾಡದ ಅಭ್ಯರ್ಥಿ ಆಯ್ಕೆ ಬಾಕಿಯಿದ್ದು ಮಾಜಿ ಸಚಿವ ವಿನಯ್‌ ಕುಲಕರ್ಣಿ ಹೆಸರು ಮುಂಚೂಣಿಗೆ ಬಂದಿದೆ. ಮತ್ತೊಂದೆಡೆ ಮಾಜಿ ಸಂಸದ ಪ್ರೊ.ಐ.ಜಿ.ಸನದಿ ಪುತ್ರ ಶಾಕೀರ್‌ ಸನದಿ ಅವರಿಗೆ ಟಿಕೆಟ್‌ ನೀಡಬೇಕೆಂಬ ಒತ್ತಡವೂ ಇದೆ. ಇಬ್ಬರ ಹೆಸರನ್ನೂ ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ. ಅಂತಿಮ ತೀರ್ಮಾನ ಪ್ರಕಟವಾಗಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ