ಆ್ಯಪ್ನಗರ

ದಿಗ್ವಿಜಯ್ ಸಿಂಗ್‌ರನ್ನು ಉಗ್ರರಿಗೆ ಹೋಲಿಸಿದ ಸಾಧ್ವಿ ಪ್ರಜ್ಞಾ

ಓರ್ವ ಭಯೋತ್ಪಾದಕನನ್ನು ಸಂಹಾರ ಮಾಡಲು ಸಾಧು, ಸಂತರೇ ಬರಬೇಕಾಯಿತು ಎಂದು ಪರೋಕ್ಷವಾಗಿ ತಮ್ಮನ್ನು ಹಾಗೂ ದಿಗ್ವಿಜಯ್ ಸಿಂಗ್ ಅವರನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

TIMESOFINDIA.COM 25 Apr 2019, 4:58 pm
ಹೊಸದಿಲ್ಲಿ: ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಓರ್ವ ಭಯೋತ್ಪಾದಕ ಎಂದು ಪರೋಕ್ಷವಾಗಿ ಹೇಳುವ ಮೂಲಕ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಗುಜರಾತ್‌ನ ಸಿಹೋರ್‍‌‌ನಲ್ಲಿ ನೂತನ ಬಿಜೆಪಿ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ಓರ್ವ ಭಯೋತ್ಪಾದಕನನ್ನು ಸಂಹಾರ ಮಾಡಲು ಸಾಧು, ಸಂತರೇ ಬರಬೇಕಾಯಿತು ಎಂದು ಪರೋಕ್ಷವಾಗಿ ತಮ್ಮನ್ನು ಹಾಗೂ ದಿಗ್ವಿಜಯ್ ಸಿಂಗ್ ಅವರನ್ನು ಉಲ್ಲೇಖಿಸಿ ಅವರು ಮಾತನಾಡಿದ್ದಾರೆ.

ಹೇಮಂತ ಕರ್ಕರೆ ಅವರು ನನ್ನನ್ನು ಮಾಲೇಗಾಂವ್‌ ಸ್ಫೋಟ ಪ್ರಕರಣದಲ್ಲಿ ಸುಳ್ಳು ಕೇಸು ಹಾಕಿ ಸಿಲುಕಿಸಿದರು. ನನ್ನ ಮೇಲೆ ದೌರ್ಜನ್ಯ ಎಸಗಿದರು. ಆಗ ನಾನು ಅವರಿಗೆ ‘ನೀನು ನಾಶವಾಗಿ ಹೋಗುತ್ತೀಯಾ. ನಿನ್ನ ವಂಶವೇ ಸರ್ವನಾಶವಾಗಿ ಹೋಗುತ್ತದೆ ಎಂದು ಶಾಪ ಹಾಕಿದೆ. ನಾನು ಶಾಪ ಹಾಕಿದ ಕೆಲವೇ ತಿಂಗಳುಗಳಲ್ಲಿ ಆತ ಆತಂಕವಾದಿಗಳಿಂದ ಹತ್ಯೆಯಾಗಿ ಹೋದ’ ಎಂದು ಇತ್ತೀಚೆಗಷ್ಟೆ ಸಾಧ್ವಿ ಪ್ರಜ್ಞಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಳಿಕ ಕ್ಷಮೆ ಕೂಡ ಕೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ