ಆ್ಯಪ್ನಗರ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಾಣಸಿಯಲ್ಲಿ ಸ್ಪರ್ಧಿಸುವವರಾರು ಗೊತ್ತೆ?

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಾಣಸಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ವಿಧಾನಸಭೆಗೆ ಆರಿಸಿ ಬಂದಿದ್ದ ಗೋರಾಖ್‌ಪುರ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಲು ಎಸ್‌ಪಿ-ಬಿಎಸ್‌ಪಿ ಮುಂದಾಗಿದೆ.

Agencies 22 Feb 2019, 11:51 am
ಲಖನೌ: ಉತ್ತರ ಪ್ರದೇಶದಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ ಲೋಕಸಭೆ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಂಡಿದೆ 37-38 ಸೀಟು ಹಂಚಿಕೆ ಮಾಡಿಕೊಂಡಿವೆ. ಇನ್ನು ಕೇಂದ್ರದ ಮಾಜಿ ಸಚಿವ ಅಜಿತ್‌ ಸಿಂಗ್‌ ನೇತೃತ್ವದ ರಾಷ್ಟ್ರೀಯ ಲೋಕ ದಳಕ್ಕೆ 3 ಸೀಟು ಮತ್ತು ಕಾಂಗ್ರೆಸ್‌ಗೆ 2 ಸೀಟು ಬಿಟ್ಟುಕೊಡಲಾಗಿದೆ.
Vijaya Karnataka Web Narendra Modi


ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಕ್ಷೇತ್ರ ವಾರಾಣಸಿಯಲ್ಲಿ ಮೈತ್ರಿ ಪಡೆಯಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಾಗಿ ಘೋಷಣೆ ಮಾಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆರಿಸಿ ಬಂದಿದ್ದ ಗೋರಖ್‌ಪುರ ಕ್ಷೇತ್ರದಿಂದಲೂ ಎಸ್‌ಪಿ ಅಭ್ಯರ್ಥಿ ಅಖಾಡಕ್ಕೆ ಇಳಿಯಲಿದ್ದಾರೆ. ಯೋಗಿ ಆದಿತ್ಯನಾಥ್‌ ಮುಖ್ಯಮಂತ್ರಿಯಾದ ನಂತರ ಖಾಲಿಯಾಗಿದ್ದ ಕ್ಷೇತ್ರದಲ್ಲಿ ಎಸ್‌ಪಿ ಅಭ್ಯರ್ಥಿ ಪ್ರವೀಣ್‌ ಕುಮಾರ್‌ ನಿಶಾದ್‌ 21,961 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದರು.

ನಿರೀಕ್ಷೆಯಂತೆ ಸೋನಿಯಾ ಗಾಂಧಿ ಪ್ರತಿನಿಧಿಸುವ ರಾಯ್‌ಬರೇಲಿ ಮತ್ತು ರಾಹುಲ್‌ ಗಾಂಧಿ ಪ್ರತಿನಿಧಿಸುವ ಆಮೇಠಿ ಕ್ಷೇತ್ರಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲಾಗಿದೆ. ಆರಂಭದಲ್ಲಿ 38-38 ಸೀಟು ಹಂಚಿಕೆಗೆ ಮಾಯಾವತಿ ಮತ್ತು ಅಖಿಲೇಶ್‌ ಯಾದವ್‌ ಪಟ್ಟು ಹಿಡಿದಿದ್ದರು. ಕೊನೆಗೆ 1 ಕ್ಷೇತ್ರವನ್ನು ಸಮಾಜವಾದಿ ಪಕ್ಷ ಬಿಎಸ್‌ಪಿಗೆ ಬಿಟ್ಟುಕೊಟ್ಟಿದೆ. ಈ ಮೂಲಕ ಅಕಾಲಿ ದಳದಿಂದ ಮೂವರು ಅಭ್ಯರ್ಥಿಗಳು ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ.

ಈ ನಡುವೆ ಎಸ್‌ಪಿ ಮತ್ತು ಬಿಎಸ್‌ಪಿ ನಡುವೆ 37-38 ಸೀಟು ಹಂಚಿಕೆ ಬಗ್ಗೆ ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸಂಸತ್ತಿನಲ್ಲಿ ಎಸ್‌ಪಿ ಹಿರಿಯ ನಾಯಕ ಮುಲಾಯಂ ಸಿಂಗ್‌ ಯಾದಲ್‌ ನರೇಂದ್ರ ಮೋದಿಯೇ ಮುಂದಿನ ಪ್ರಧಾನಿ ಆಗಬೇಕು ಎಂದು ಹೇಳುವ ಮೂಲಕ ಭಾರಿ ಅಚ್ಚರಿ ಮೂಡಿಸಿದ್ದರು.

ಮುಲಾಯಂ ಸಿಂಗ್‌ ಅಸಮಾಧಾನದ ನಡುವೆಯೇ ಬಿಎಸ್‌ಪಿ-ಎಸ್‌ಪಿ ಸೀಟು ಹಂಚಿಕೆ ಫೈನಲ್‌, 37-38 ಅಧಿಕೃತ ಘೋಷಣೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ