ಆ್ಯಪ್ನಗರ

ಮಮತಾ 'ಮೀಮ್' ವಿವಾದ: ಬಿಜೆಪಿ ಯುವಮೋರ್ಚಾ ನಾಯಕಿ ಪ್ರಿಯಾಂಕಾ ಶರ್ಮಾಗೆ ಜಾಮೀನು

ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟಿನ ರಜಾಕಾಲದ ಪೀಠ ಪ್ರಕರಣದ ವಿಚಾರಣೆ ನಡೆಸಿದ ಬಳಿಕ 'ನಾವು ಜಾಮೀನು ಮಂಜೂರು ಮಾಡಬಹುದು; ಆದರೆ ಆಕೆ ಕ್ಷಮೆ ಯಾಚಿಸಬೇಕು' ಎಂದು ಸೂಚಿಸಿತು. ಮಮತಾ ಬ್ಯಾನರ್ಜಿ ಅವರ ತಿದ್ದಿದ ಚಿತ್ರವೊಂದನ್ನು ಶೇರ್ ಮಾಡಿಕೊಂಡ ಆರೋಪದಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಪ್ರಿಯಾಂಕಾ ಶರ್ಮಾ ಅವರನ್ನು ಬಂಧಿಸಿದ್ದರು. ಇದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ಎತ್ತಿಕೊಂಡಿತ್ತು.

Vijaya Karnataka Web 14 May 2019, 2:05 pm
ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತಿದ್ದಿದ ಚಿತ್ರವೊಂದನ್ನು (ಮೀಮ್) ಫೇಸ್‌ಬುಕ್‌ನಲ್ಲಿ ಶೇರ್ ಮಾಡಿದ ಆರೋಪದಲ್ಲಿ ಬಂಧಿತರಾದ ಬಿಜೆಪಿ ಯುವ ಮೋರ್ಚಾ ನಾಯಕಿ ಪ್ರಿಯಾಂಕಾ ಶರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
Vijaya Karnataka Web Priyanka Sharma-BJP


ನ್ಯಾಯಾಂಗ ಬಂಧನದಿಂದ ಬಿಡುಗಡೆಯಾದ ಬಳಿಕ ಪ್ರಿಯಾಂಕಾ ಶರ್ಮಾ ಅವರು ಲಿಖಿತವಾಗಿ ತೃಣಮೂಲ ನಾಯಕಿಯ ಕ್ಷಮೆ ಯಾಚಿಸಬೇಕು ಎಂದು ಕೋರ್ಟ್ ಸೂಚಿಸಿದೆ.

ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟಿನ ರಜಾಕಾಲದ ಪೀಠ ಪ್ರಕರಣದ ವಿಚಾರಣೆ ನಡೆಸಿದ ಬಳಿಕ 'ನಾವು ಜಾಮೀನು ಮಂಜೂರು ಮಾಡಬಹುದು; ಆದರೆ ಆಕೆ ಕ್ಷಮೆ ಯಾಚಿಸಬೇಕು' ಎಂದು ಸೂಚಿಸಿತು.

ಮಮತಾ ಬ್ಯಾನರ್ಜಿ ಅವರ ತಿದ್ದಿದ ಚಿತ್ರವೊಂದನ್ನು ಶೇರ್ ಮಾಡಿಕೊಂಡ ಆರೋಪದಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಪ್ರಿಯಾಂಕಾ ಶರ್ಮಾ ಅವರನ್ನು ಬಂಧಿಸಿದ್ದರು. ಇದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ಎತ್ತಿಕೊಂಡಿತ್ತು.

'ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಅದ್ಭುತ ಪರಿಣಾಮವಿದು' ಎಂದು ಪ್ರಿಯಾಂಕಾ ಅವರ ವಕೀಲರು ಸುಪ್ರೀಂ ಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಿದರು.

ತಮ್ಮ ಕಕ್ಷಿದಾರರು ಆ ಚಿತ್ರವನ್ನು ಸೃಷ್ಟಿಸಿಲ್ಲ, ಸಾಮಾಜಿಕ ಜಾಲತಾಣದಲ್ಲಿ ಈಗಾಗಲೇ ಹರಿದಾಡುತ್ತಿರುವ ಆ ಚಿತ್ರವನ್ನು ಅವರು ಕೇವಲ ಹಂಚಿಕೊಂಡಿದ್ದಾರೆ ಅಷ್ಟೆ ಎಂದು ವಕೀಲರು ಕೋರ್ಟಿನಲ್ಲಿ ವಾದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ