ಹೊಸದಿಲ್ಲಿ: ಕ್ರಿಮಿನಲ್ ಅಪರಾಧ ಪ್ರಕರಣಗಳ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಬರಾಖ್ಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್ ಅವರಿಗೆ ಮೇ 28ರವರೆಗೆ ಪೊಲೀಸ್ ಬಂಧನದಿಂದ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿದೆ. ಗುರುವಾರ ನಡೆಯುವ ಮತ ಎಣಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಿಂಗ್ ಅವರಿಗೆ ಅನುವು ಮಾಡಿಕೊಟ್ಟ ಸುಪ್ರೀಂ ಕೋರ್ಟ್ನ ರಜಾಕಾಲದ ಪೀಠವು, ಮೇ 28ರವರೆಗೆ ಅವರನ್ನು ಬಂಧಿಸಕೂಡದು ಎಂದು ಪಶ್ಚಿಮ ಬಂಗಾಳ ಸರಕಾರಕ್ಕೆ ತಾಕೀತು ಮಾಡಿತು. ''ಅರ್ಜುನ್ ಸಿಂಗ್ ವಿರುದ್ಧ ಮಮತಾ ಬ್ಯಾನರ್ಜಿ ಸರಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಏಪ್ರಿಲ್ 4ರಿಂದ ಮೇ 20ರವರೆಗಿನ ಅವಧಿಯಲ್ಲಿ ಅವರ ವಿರುದ್ಧ 20 ಕ್ರಿಮಿನಲ್ ಪ್ರಕರಣಗಳನ್ನು ದಾಖಲಾಗಿದೆ,'' ಎಂದು ಸಿಂಗ್ ಅವರ ವಕೀಲ ರಂಜಿತ್ ಕುಮಾರ್ ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.
ಬಿಜೆಪಿ ಅಭ್ಯರ್ಥಿಗೆ ಮೇ 28ರವರೆಗೆ ಬಂಧನದಿಂದ ರಕ್ಷಣೆ ನೀಡಿದ ಕೋರ್ಟ್
ಅರ್ಜುನ್ ಸಿಂಗ್ ವಿರುದ್ಧ ಮಮತಾ ಬ್ಯಾನರ್ಜಿ ಸರಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಏಪ್ರಿಲ್ 4ರಿಂದ ಮೇ 20ರವರೆಗಿನ ಅವಧಿಯಲ್ಲಿ ಅವರ ವಿರುದ್ಧ 20 ಕ್ರಿಮಿನಲ್ ಪ್ರಕರಣಗಳನ್ನು ದಾಖಲಾಗಿದೆ ಎಂದು ಸಿಂಗ್ ಅವರ ವಕೀಲ ರಂಜಿತ್ ಕುಮಾರ್ ನ್ಯಾಯಪೀಠಕ್ಕೆ ಮನವರಿಕೆ
PTI 23 May 2019, 5:00 am