ಹೊಸದಿಲ್ಲಿ: ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ 'ಪ್ರೆಶರ್ ಕುಕ್ಕರ್' ಚಿಹ್ನೆ ನೀಡಬೇಕೆಂಬ ಅಮ್ಮಾ ಮಕ್ಕಳ ಮುನ್ನೇತ್ರ ಕಝಗಂ ನಾಯಕ ಟಿ.ಟಿ.ವಿ. ದಿನಕರನ್ ಅವರ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಳ್ಳಿಹಾಕಿದೆ. ಆದರೆ, ಈ ಸಂಘಟನೆಯ ಅಭ್ಯರ್ಥಿಗಳನ್ನು ಸ್ವತಂತ್ರ ಅಭ್ಯರ್ಥಿಗಳೆಂದು ಪರಿಗಣಸಿದರೂ ಸಾಮಾನ್ಯ ಚಿಹ್ನೆ ನೀಡುವ ಕುರಿತು ಪರಿಶೀಲನೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ದಿನಕರನ್ ಸಂಘಟನೆಗೆ ರಾಜಕೀಯ ಪಕ್ಷದ ಮಾನ್ಯತೆ ನೀಡುವುದು ಹಾಗೂ ಚುನಾವಣಾ ಚಿಹ್ನೆ ನೀಡುವುದು ಚುನಾವಣಾ ಆಯೋಗದ ಕೆಲಸ. ಆ ಸಂಬಂಧ ಅಗತ್ಯ ಪ್ರಕ್ರಿಯೆಗಳನ್ನು ಆಯೋಗವೇ ನಡೆಸಲಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ತ್ರಿಸದಸ್ಯ ಪೀಠ ಅಭಿಪ್ರಾಯಪಟ್ಟಿತು.
ದಿನಕರನ್ ಪಕ್ಷಕ್ಕೆ ಕುಕ್ಕರ್ ಚಿಹ್ನೆ ಸಿಗಲ್ಲ!
ಟಿ.ಟಿ.ವಿ. ದಿನಕರನ್ ಅವರ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಳ್ಳಿಹಾಕಿದೆ.
Vijaya Karnataka 27 Mar 2019, 5:00 am