ಆ್ಯಪ್ನಗರ

ಮೋದಿ ವಿರುದ್ಧದ ದೂರು: ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ಕಾಂಗ್ರೆಸ್‌ ಸಂಸದೆ ಸುಷ್ಮಿತಾ ದೇವ್‌ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ತ್ರಿಸದಸ್ಯ ಪೀಠ, ಚುನಾವಣೆ ಸಂದರ್ಭ ನಿರ್ದಿಷ್ಟ ರಾಜಕೀಯ ಮುಖಂಡರುಗಳಿಂದ ಆಗಿರುವ ನೀತಿ ಸಂಹಿತೆ ಉಲ್ಲಂಘನೆಯ ದೂರುಗಳಿಗೆ ಯಾಕೆ ಸ್ಪಂದಿಸುತ್ತಿಲ್ಲ ಎಂದು ಚುನಾವಣಾ ಆಯೋಗವನ್ನು ಪ್ರಶ್ನಿಸಿತು.

Vijaya Karnataka 1 May 2019, 5:00 am
ಹೊಸದಿಲ್ಲಿ: ದ್ವೇಷ ಭಾಷಣ ಮತ್ತು ಸಶಸ್ತ್ರಪಡೆಗಳ ಸೇವೆಯನ್ನು ರಾಜಕೀಯ ಪ್ರಚಾರಕ್ಕೆ ಬಳಸಿಕೊಂಡ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ವಿರುದ್ಧ ಕ್ರಮ ಜರುಗಿಸದೇ ಇರುವ ದೂರಿಗೆ ಸಂಬಂಧಿಸಿದಂತೆ ಸೂಕ್ತ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ.
Vijaya Karnataka Web BNG-3004-2-2-SUPREME


ಕಾಂಗ್ರೆಸ್‌ ಸಂಸದೆ ಸುಷ್ಮಿತಾ ದೇವ್‌ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ತ್ರಿಸದಸ್ಯ ಪೀಠ, ಚುನಾವಣೆ ಸಂದರ್ಭ ನಿರ್ದಿಷ್ಟ ರಾಜಕೀಯ ಮುಖಂಡರುಗಳಿಂದ ಆಗಿರುವ ನೀತಿ ಸಂಹಿತೆ ಉಲ್ಲಂಘನೆಯ ದೂರುಗಳಿಗೆ ಯಾಕೆ ಸ್ಪಂದಿಸುತ್ತಿಲ್ಲ ಎಂದು ಚುನಾವಣಾ ಆಯೋಗವನ್ನು ಪ್ರಶ್ನಿಸಿತು.

ಬಿಜೆಪಿ ಪ್ರಮುಖ ನಾಯಕರ ವಿರುದ್ಧ ಶಿಸ್ತು ಕ್ರಮ ಜರುಗಿಸುವಲ್ಲಿ ಆಯೋಗ ಸಂಪೂರ್ಣ ನಿಷ್ಕ್ರಿಯತೆ ಪ್ರದರ್ಶಿಸಿದೆ. ಇಷ್ಟು ಮಾತ್ರವಲ್ಲದೇ, ಆಯೋಗದ ನಡೆಯು ಸ್ಪಷ್ಟವಾದ ತಾರತಮ್ಯ ಧೋರಣೆಗೆ ಸಾಕ್ಷಿಯಾಗಿದೆ. ಇದರಿಂದ ಚುನಾವಣಾ ಪ್ರಕ್ರಿಯೆ ಸಮಗ್ರತೆಗೂ ಧಕ್ಕೆ ಒದಗಿದೆ ಎಂದು ಅರ್ಜಿದಾರರು ದೂರಿದ್ದಾರೆ.

ಮೋದಿ ಮತ್ತು ಶಾ ವಿರುದ್ಧ ಇಂತಹ ಹಲವು ಅರ್ಜಿಗಳು ದಾಖಲಾಗಿದ್ದು ಅವುಗಳ ಜತೆಗೆ ಈ ಪ್ರಕರಣವನ್ನು ಸೇರಿಸಿರುವ ಸುಪ್ರೀಂ ಕೋರ್ಟ್‌, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ