ಆ್ಯಪ್ನಗರ

ಕೇರಳ/ತಮಿಳ್ನಾಡಲ್ಲಿ ಚುನಾವಣೆ ಎದುರಿಸೋ ತಾಕತ್ತು ಪಿಎಂ ಮೋದಿಗಿದೆಯೇ?: ಶಶಿ ತರೂರ್‌

ಪಿಟಿಐ ಸಂದರ್ಶನದಲ್ಲಿ ಭಾಗವಹಿಸಿದ್ದ ಶಶಿ ತರೂರ್‌, ಮುಂದಿನ ಪ್ರಧಾನಿಯನ್ನು ಆರಿಸಿ ಕಳುಹಿಸಲು ದಕ್ಷಿಣದ ರಾಜ್ಯದ ಜನರು ಥ್ರಿಲ್‌ ಆಗಿದ್ದಾರೆ ಎಂದು ತಿಳಿಸಿದ್ದಾರೆ.

PTI 7 Apr 2019, 3:50 pm
ಹೊಸದಿಲ್ಲಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ವಯನಾಡು ಆರಿಸಿಕೊಂಡ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರ ಟೀಕೆಗೆ ಕಾಂಗ್ರೆಸ್‌ ಹಿರಿಯ ನಾಯಕ ಪ್ರತ್ಯುತ್ತರ ನೀಡಿದ್ದಾರೆ.
Vijaya Karnataka Web Shashi Tharoor


ರಾಹುಲ್‌ ಗಾಂಧಿ ಅವರಿಗೆ ಭಾರತದ ದಕ್ಷಿಣದಲ್ಲಾಗಲಿ, ಉತ್ತರದಲ್ಲಾಗಲಿ ಗೆಲ್ಲುವ ಸಾಮರ್ಥ್ಯವಿದೆ. ಆದರೆ ನರೇಂದ್ರ ಮೋದಿ ಅವರಿಗೆ ಕೇರಳ ಅಥವಾ ತಮಿಳುನಾಡಿನಲ್ಲಿ ಸ್ಪರ್ಧಿಸುವ ಧೈರ್ಯ ಇದೆಯೇ? ಎಂದು ಭಾನುವಾರ ಶಶಿ ತರೂರ್‌ ಪ್ರಶ್ನಿಸಿದ್ದಾರೆ.

ಪಿಟಿಐ ಸಂದರ್ಶನದಲ್ಲಿ ಭಾಗವಹಿಸಿದ್ದ ಶಶಿ ತರೂರ್‌, ಮುಂದಿನ ಪ್ರಧಾನಿಯನ್ನು ಆರಿಸಿ ಕಳುಹಿಸಲು ದಕ್ಷಿಣದ ರಾಜ್ಯದ ಜನರು ಥ್ರಿಲ್‌ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ರಾಹುಲ್‌ ಗಾಂಧಿ ಸ್ಪರ್ಧೆಗೆ ವಯನಾಡು ಕ್ಷೇತ್ರವನ್ನು ಆರಿಸಿಕೊಂಡ ಬಗ್ಗೆ ಪಿಎಂ ಮೋದಿ ಮತ್ತು ಬಿಜೆಪಿ, ಬಹುಸಂಖ್ಯಾತರು ಹೆಚ್ಚಿರುವ ಕ್ಷೇತ್ರದಿಂದ ಪಲಾಯನಗೈದು, ಅಲ್ಪಸಂಖ್ಯಾತರು ಹೆಚ್ಚಿರುವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದೆಲ್ಲಾ ಟೀಕಿಸುತ್ತಿರುವುದು ಧರ್ಮಾಂಧತೆಯ ಪ್ರತೀಕ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌