ಆ್ಯಪ್ನಗರ

ನಮಾಜ್‌ ರೀತಿ ಕುಳಿತು ಮಂದಿರದಲ್ಲಿ ಪ್ರಾರ್ಥನೆ: ಆದಿತ್ಯನಾಥ್‌ ಕಿಡಿ

ಕಾಂಗ್ರೆಸ್‌ನ ಕುಟುಂಬವೊಂದು ಚುನಾವಣೆ ಸಮೀಪಿಸಿದಾಗ ಮಾತ್ರ ಭಕ್ತಿಯ ನಾಟಕ ಪ್ರದರ್ಶಿಸುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಟೀಕಿಸಿದ್ದಾರೆ.

Vijaya Karnataka 27 Mar 2019, 5:00 am
ಲಖನೌ: ಶ್ರೀರಾಮನ ಬಗ್ಗೆ ಕಿಂಚಿತ್ತೂ ಭಕ್ತಿ ಇಲ್ಲದ ಕಾಂಗ್ರೆಸ್‌ನ ಕುಟುಂಬವೊಂದು ಚುನಾವಣೆ ಸಮೀಪಿಸಿದಾಗ ಮಾತ್ರ ಭಕ್ತಿಯ ನಾಟಕ ಪ್ರದರ್ಶಿಸುತ್ತದೆ. ದೇವಸ್ಥಾನಗಳಿಗೆ ಭೇಟಿ ನೀಡುವ ಇವರು ನಮಾಜ್‌ ಭಂಗಿಯಲ್ಲಿ ಕುಳಿತು ಪ್ರಾರ್ಥನೆ ಸಲ್ಲಿಸಿ, ಹಿಂದೂಗಳನ್ನು ಅವಮಾನಿಸುತ್ತಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಟೀಕಿಸಿದ್ದಾರೆ. ಚುನಾವಣಾ ರಾರ‍ಯಲಿ ಉದ್ದೇಶಿಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ವ್ಯಾಜ್ಯ ಇತ್ಯರ್ಥಗೊಳ್ಳದಂತೆ ಕಾಂಗ್ರೆಸ್‌ ನಿರಂತರ ತಡೆ ಹಾಕುತ್ತ ಬಂದಿದೆ. ಕಪಿಲ್‌ ಸಿಬಲ್‌ ನೇತೃತ್ವದ ವಕೀಲರ ದೊಡ್ಡ ತಂಡವೇ ಕಾಂಗ್ರೆಸ್‌ ಉದ್ದೇಶ ಈಡೇರಿಸಲು ಕೆಲಸ ಮಾಡುತ್ತಿದೆ ಎಂದು ದೂರಿದರು. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.
Vijaya Karnataka Web f35b2f6e-f08e-4221-ad8e-56b0ec4810cd

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ