ಆ್ಯಪ್ನಗರ

ಬಿಜೆಪಿ ಪ್ರಣಾಳಿಕೆ: 200ಕ್ಕೆ 100 ಅಂಕಗಳನ್ನು ನೀಡಿದ ಶಿವಸೇನೆ!

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಇರುವ ಆರ್ಟಿಕಲ್‌ 370ರ ರದ್ದು ಪಡಿಸುವ ಬಗ್ಗೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವ ಹಿನ್ನಲೆ ಇಷ್ಟು ಅಂಕಗಳನ್ನು ಶಿವಸೇನೆ ನೀಡಿದೆ.

TOI.in 10 Apr 2019, 12:44 pm
ಮುಂಬಯಿ: ಸಂಕಲ್ಪ ಪತ್ರ ಹೆಸರಲ್ಲಿ ಬಿಜೆಪಿ ಲೋಕಸಭೆ ಚುನಾವಣೆ 2019ರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದಕ್ಕೆ 200ರಲ್ಲಿ 100 ಅಂಕಗಳನ್ನು ಶಿವಸೇನೆ ನೀಡಿದೆ.
Vijaya Karnataka Web Narendra Modi


ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಇರುವ ಆರ್ಟಿಕಲ್‌ 370ರ ರದ್ದು ಪಡಿಸುವ ಬಗ್ಗೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವ ಹಿನ್ನಲೆ ಇಷ್ಟು ಅಂಕಗಳನ್ನು ಶಿವಸೇನೆ ನೀಡಿದೆ.

ರಾಮ ಮಂದಿರ ನಿರ್ಮಾಣಕ್ಕೆ 2019 ಕೊನೆಯ ಅವಕಾಶ. ರಾಷ್ಟ್ರದ ಭದ್ರತೆ ವಿಚಾರವಾಗಿ ರಾಜಿ ಇಲ್ಲ ಎಂದು ಮಹಾರಾಷ್ಟ್ರ ಮತ್ತು ಕೇಂದ್ರ ಬಿಜೆಪಿ ಮಿತ್ರ ಪಕ್ಷ ಶಿವಸೇನೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂಗಳಾದ ಓಮರ್‌ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ ಅವರ ಆರ್ಟಿಕಲ್‌ 370ಕ್ಕೆ ಸಂಬಂಧಿಸಿ ನೀಡಿದ ಹೇಳಿಕೆಗಳ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ. ಅಂತಹವರ ಬಾಯಿಗಳನ್ನು ಮುಚ್ಚಿಸಬೇಕು. ರಾಜ್ಯಕ್ಕೆ ವಿಶೇಷ ಸ್ಥಾನಮಾನ ತೆಗೆದು ಹಾಕಿ ಹೇಗೆ ತ್ರಿವರ್ಣ ಧ್ವಜವನ್ನು ಹಾರಿಸುತ್ತಾರೆ ನೋಡುತ್ತೇವೆ ಎಂಬ ಬೆದರಿಕೆಯನ್ನು ಫಾರೂಖ್‌ ಅಬ್ದುಲ್ಲಾ ಹೇಳಿದ್ದಾರೆ. ಹೀಗೆ ಹೇಳುವವರ ನಾಲಿಗೆ ಕತ್ತರಿಸಬೇಕು ಎಂದು ಸಾಮ್ನಾದ ಸಂಪಾದಕೀಯದಲ್ಲಿ ಬರೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌