ಆ್ಯಪ್ನಗರ

ಲಾಲ್‌ ಬಹದ್ದೂರ್ ಶಾಸ್ತ್ರಿಗೆ ಪ್ರಿಯಾಂಕಾ ಅವಮಾನ: ಸ್ಮೃತಿ ಇರಾನಿ ಟೀಕೆ

ಪ್ರಿಯಾಂಕಾ ವಾದ್ರಾ ತಮ್ಮ ಕೊರಳಿನಲ್ಲಿಯೇ ಇದ್ದ ಹೂವಿನ ಹಾರವನ್ನು ತೆಗೆದು ಅದೇ ಹಾರವನ್ನು ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಪತ್ರಿಮೆಗೆ ಹಾಕಿದ್ದಾರೆ. ಈ ವೀಡಿಯೋವನ್ನು ಸ್ಮೃತಿ ಇರಾನಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಾಕಿಕೊಂಡಿದ್ದಾರೆ.

Vijaya Karnataka Web 21 Mar 2019, 9:25 pm
ಹೊಸದಿಲ್ಲಿ: ದೇಶದ ಹೆಮ್ಮೆಯ ದಿವಂಗತ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರನ್ನು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವಮಾನಿಸಿದ್ದಾರೆ ಎಂದು ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಆರೋಪಿಸಿದ್ದಾರೆ.
Vijaya Karnataka Web ಸ್ಮೃತಿ ಇರಾನಿ
ಸ್ಮೃತಿ ಇರಾನಿ


ಪ್ರಿಯಾಂಕಾ ವಾದ್ರಾ ತಮ್ಮ ಕೊರಳಿನಲ್ಲಿಯೇ ಇದ್ದ ಹೂವಿನ ಹಾರವನ್ನು ತೆಗೆದು ಅದೇ ಹಾರವನ್ನು ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಪತ್ರಿಮೆಗೆ ಹಾಕಿದ್ದಾರೆ.

ಈ ವೀಡಿಯೋವನ್ನು ಸ್ಮೃತಿ ಇರಾನಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಾಕಿಕೊಂಡಿದ್ದಾರೆ.


ಇದನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವರು, ಪ್ರಿಯಾಂಕಾ ಅವರು ಮಾಜಿ ಪ್ರಧಾನಿಗೆ ಅವಮಾನ ತೋರಿದ್ದಾರೆ. ಇದು ಕಾಂಗ್ರೆಸ್‌ನ ಸಂಸ್ಕೃತಿಯನ್ನು ತೋರುತ್ತದೆ ಎಂದು ಟೀಕಿಸಿದರು.

ಲೋಕಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಪ್ರಿಯಾಂಕ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.

ಜತೆಗೆ ಟೆಂಪಲ್‌ ರನ್‌ ಕೂಡ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು, ಬೆಂಬಲಿಗರು, ಜನರೊಂದಿಗೆ ಪ್ರಿಯಾಂಕಾ ವಾದ್ರಾ ಸಮಾಲೋಚನೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌