ಆ್ಯಪ್ನಗರ

ಗೆದ್ದಿರುವುದು ಗಾಂಧಿ ಹಂತಕನ ಸಿದ್ಧಾಂತ: ಕಳವಳ ವ್ಯಕ್ತಪಡಿಸಿದ ದಿಗ್ವಿಜಯ್ ಸಿಂಗ್

ಮಧ್ಯ ಪ್ರದೇಶದ ಭೋಪಾಲ ಲೋಕಸಭಾ ಕ್ಷೇತ್ರದಲ್ಲಿ ಸಾದ್ವಿ ಪ್ರಜ್ಞಾ ಸಿಂಗ್ ವಿರುದ್ಧ ದಿಗ್ವಿಜಯ್ ಸಿಂಗ್ ಸುಮಾರು ಮೂರು ಲಕ್ಷ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದಾರೆ.

Agencies 24 May 2019, 4:50 pm
ಹೊಸದಿಲ್ಲಿ: ಈ ದೇಶದಲ್ಲಿಂದು ಮಹಾತ್ಮ ಗಾಂಧಿ ಹಂತಕನ ಸಿದ್ದಾಂತ ಗೆದ್ದಿದ್ದರೆ, ಗಾಂಧಿ ಸಿದ್ದಾಂತ ಸೋಲು ಕಂಡಿದೆ. ಇದೇ ನನ್ನ ಕಳವಳಕ್ಕೆ ಕಾರಣವಾಗಿದೆ ಎಂದು ಭೋಪಾಲ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಾದ್ವಿ ಪ್ರಜ್ಞಾ ಸಿಂಗ್ ವಿರುದ್ಧ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೊಂಡಿದ್ದಾರೆ.
Vijaya Karnataka Web dighvijay


ಮಧ್ಯ ಪ್ರದೇಶದ ಭೋಪಾಲ ಲೋಕಸಭಾ ಕ್ಷೇತ್ರದಲ್ಲಿ ಸಾದ್ವಿ ಪ್ರಜ್ಞಾ ಸಿಂಗ್ ವಿರುದ್ಧ ದಿಗ್ವಿಜಯ್ ಸಿಂಗ್ ಸುಮಾರು ಮೂರು ಲಕ್ಷ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದಾರೆ.

ಸೋಲಿನ ಬಳಿಕ ಮಾಧ್ಯಮದ ಜತೆ ಮಾತನಾಡಿದ ಅವರು, ನನಗೆ ಬೇಸರವನ್ನುಂಟು ಮಾಡಿರುವುದು ನನ್ನ ಸೋಲಲ್ಲ. ಬದಲಾಗಿ ಗಾಂಧಿ ಹಂತಕನ ಸಿದ್ಧಾಂತದ ಗೆಲುವು ಎಂದಿದ್ದಾರೆ.


ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ದೇಶಭಕ್ತ ಹೌದು, ಆಗಿದ್ದ ಮತ್ತು ಮುಂದೆಯೂ ದೇಶಭಕ್ತನೇ ಆಗಿರುತ್ತಾನೆ ಎಂದು ಹೇಳಿಕೆ ನೀಡುವ ಮೂಲಕ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್ ಭಾರೀ ವಿವಾದ ಸೃಷ್ಟಿಸಿ ಬಳಿಕ ಕ್ಷಮೆಯಾಚಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ