ಆ್ಯಪ್ನಗರ

ಲೋಕಸಭೆ ಚುನಾವಣೆ : ಎಸ್‌.ಎಸ್‌.ಮಲ್ಲಿಕಾರ್ಜುನ್‌ ಸ್ಪರ್ಧೆ ಖಚಿತ

ಕಾಂಗ್ರೆಸ್‌ ಹೈಕಮಾಂಡ್‌ ನಮ್ಮ ಕುಟುಂಬದವರಿಗೆ ಸ್ಪರ್ಧೆ ಮಾಡಲು ಹೇಳಿದ್ದರು. ಈ ಕಾರಣದಿಂದ ಮಾಜಿ ಸಚಿವ ಮಲ್ಲಿಕಾರ್ಜುನ್‌ ಸರ್ಧಿಸುತ್ತಾರೆ. ಇಷ್ಟರಲ್ಲಿಯೇ ಪಕ್ಷ ದಿಂದ ಅಧಿಕೃತವಾಗಿ ಘೋಷಣೆ ಆಗಲಿದೆ ಎಂದು ಸ್ಪಷ್ಟಪಡಿಸಿದರು.

Vijaya Karnataka Web 17 Mar 2019, 9:36 pm
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ಎಸ್‌ ಎಸ್‌ ಮಲ್ಲಿಕಾರ್ಜುನ
ಎಸ್‌ ಎಸ್‌ ಮಲ್ಲಿಕಾರ್ಜುನ


ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಲ್ಲಿಕಾರ್ಜುನ ಸ್ಪರ್ಧೆ ಮಾಡುತ್ತಾರೆ ಅಥವಾ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಜನರಲ್ಲಿ ಗೊಂದಲ ಇತ್ತು ಎಂದರು.

ಕಾಂಗ್ರೆಸ್‌ ಹೈಕಮಾಂಡ್‌ ನಮ್ಮ ಕುಟುಂಬದವರಿಗೆ ಸ್ಪರ್ಧೆ ಮಾಡಲು ಹೇಳಿದ್ದರು. ಈ ಕಾರಣದಿಂದ ಮಾಜಿ ಸಚಿವ ಮಲ್ಲಿಕಾರ್ಜುನ್‌ ಸರ್ಧಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ಇಷ್ಟರಲ್ಲಿಯೇ ಪಕ್ಷ ದಿಂದ ಅಧಿಕೃತವಾಗಿ ಘೋಷಣೆ ಆಗಲಿದೆ. ನಾವು ಕೂಡ ಈಗಾಗಲೇ ಪ್ರಚಾರ ಶುರು ಮಾಡಿದ್ದೇವೆ. ಜನರು ನಮ್ಮ ಕಡೆ ಇದ್ದು, ಗೆಲುವು ಖಚಿತ ಎಂದು ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌