ಮಧುರೈ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡುವ ಮೂಲಕ ತಮಿಳುನಾಡನ್ನು ಮರುಭೂಮಿಯನ್ನಾಗಿಸಲು ಡಿಎಂಕೆ ಪ್ರಯತ್ನಿಸುತ್ತಿದೆ ಎಂದು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಟೀಕಿಸಿದ್ದಾರೆ.
ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಕಾವೇರಿ ನಿರ್ವಹಣಾ ಮಂಡಳಿಯನ್ನು ರದ್ದು ಮಾಡುವುದಾಗಿ ಮತ್ತು ಕಾವೇರಿ ಸುತ್ತಲು ಅಣೆಕಟ್ಟು ನಿರ್ಮಿಸುವುದಾಗಿ ಹೇಳಿದ್ದಾರೆ ಎಂದು ಪಳನಿಸ್ವಾಮಿ ತಿಳಿಸಿದ್ದಾರೆ.
ರಾಷ್ಟ್ರದ 130 ಕೋಟಿ ಮಂದಿಯ ರಕ್ಷಣೆಯನ್ನು ಮಾಡಬಲ್ಲ ಏಕೈಕ ವ್ಯಕ್ತಿ ಎಂದರೆ ಅದು ನರೇಂದ್ರ ಮೋದಿ ಮಾತ್ರ. ಇಡೀ ರಾಷ್ಟ್ರದ ಜನತೆಯೇ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಅಗಬೇಕು ಎಂದು ಬಯಸಿದ್ದಾರೆ. ಮೋದಿ ವಿದೇಶಗಳಿಗೆ ಭೇಟಿ ನೀಡುವುದು ರಾಷ್ಟ್ರದ ಅಭಿವೃದ್ಧಿಗಾಗಿ ಎಂದು ಸಿಎಂ ಪಳನಿಸ್ವಾಮಿ ಶ್ಲಾಘಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಉಪ ಮುಖ್ಯಮಂತ್ರಿ ಪನ್ನೀರ್ಸೆಲ್ವಂ, ರಾಷ್ಟ್ರ ಮತ್ತು ತಮಿಳುನಾಡಿನ ಒಳಿತಿಗಾಗಿ ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿ ಆಗಬೇಕು ಎಂದರು.
ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಕಾವೇರಿ ನಿರ್ವಹಣಾ ಮಂಡಳಿಯನ್ನು ರದ್ದು ಮಾಡುವುದಾಗಿ ಮತ್ತು ಕಾವೇರಿ ಸುತ್ತಲು ಅಣೆಕಟ್ಟು ನಿರ್ಮಿಸುವುದಾಗಿ ಹೇಳಿದ್ದಾರೆ ಎಂದು ಪಳನಿಸ್ವಾಮಿ ತಿಳಿಸಿದ್ದಾರೆ.
ರಾಷ್ಟ್ರದ 130 ಕೋಟಿ ಮಂದಿಯ ರಕ್ಷಣೆಯನ್ನು ಮಾಡಬಲ್ಲ ಏಕೈಕ ವ್ಯಕ್ತಿ ಎಂದರೆ ಅದು ನರೇಂದ್ರ ಮೋದಿ ಮಾತ್ರ. ಇಡೀ ರಾಷ್ಟ್ರದ ಜನತೆಯೇ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಅಗಬೇಕು ಎಂದು ಬಯಸಿದ್ದಾರೆ. ಮೋದಿ ವಿದೇಶಗಳಿಗೆ ಭೇಟಿ ನೀಡುವುದು ರಾಷ್ಟ್ರದ ಅಭಿವೃದ್ಧಿಗಾಗಿ ಎಂದು ಸಿಎಂ ಪಳನಿಸ್ವಾಮಿ ಶ್ಲಾಘಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಉಪ ಮುಖ್ಯಮಂತ್ರಿ ಪನ್ನೀರ್ಸೆಲ್ವಂ, ರಾಷ್ಟ್ರ ಮತ್ತು ತಮಿಳುನಾಡಿನ ಒಳಿತಿಗಾಗಿ ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿ ಆಗಬೇಕು ಎಂದರು.